Friday, July 24, 2026
Friday, July 24, 2026

ತನಿಖಾ ವರದಿ ಬಂದ ನಂತರ ಕ್ರಮ: ಪೊಲೀಸ್ ವರಿಷ್ಠಾಧಿಕಾರಿ

ತನಿಖಾ ವರದಿ ಬಂದ ನಂತರ ಕ್ರಮ: ಪೊಲೀಸ್ ವರಿಷ್ಠಾಧಿಕಾರಿ

Date:

ಉಡುಪಿ: ಕೋಟದಲ್ಲಿ ಸಂಭವಿಸಿದ ಘಟನೆಯ ಬಗ್ಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರು, ಘಟನೆಗೆ ಸಂಬಂಧಿಸಿದಂತೆ ಎಸ್.ಐ ಸಹಿತ 6 ಪೊಲೀಸ್ ಸಿಬ್ಬಂದಿಗಳನ್ನು ಕೋಟ ಠಾಣೆಯಿಂದ ತನಿಖೆ ನಡೆಸುವ ಸಲುವಾಗಿ ಸ್ಥಳಾಂತರ ಮಾಡಲಾಗಿದೆ. ತನಿಖೆ ಮುಕ್ತಾಯಗೊಳ್ಳುವವರೆಗೂ ಅವರೆಲ್ಲರೂ ಕೋಟ ಠಾಣೆಯಲ್ಲಿ ಸೇವೆಯಲ್ಲಿರುವುದಿಲ್ಲ.

ಲೌಡ್ ಮ್ಯೂಸಿಕ್ ಕೇಳಿಬರುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಬಳಿಕ ಕೋಟ ಠಾಣೆಯ ಪೊಲೀಸರು 10 ಗಂಟೆ ಆಗಿರುವ ಕಾರಣ ಮ್ಯೂಸಿಕ್ ಬಂದ್ ಮಾಡಲು ಸೂಚನೆ ನೀಡಿದ್ದರು.

ಅವಧಿ ಮೀರಿ ಕಾರ್ಯಕ್ರಮ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಕೋಟ ಠಾಣೆಗೆ ಮಾಹಿತಿ ನೀಡಿದಾಗ ಪಿ.ಎಸ್.ಐ ಸಿಬ್ಬಂದಿಗಳ ಜೊತೆಗೆ ಸ್ಥಳಕ್ಕೆ ತೆರಳಿದರು.

ಲಾಠಿ ಚಾರ್ಜ್ ಬಗ್ಗೆ ಕೊರಗ ಸಮುದಾಯದವರು ಆರೋಪ ಮಾಡಿದ್ದು ಇದರ ಬಗ್ಗೆ ಡಿ.ವೈ.ಎಸ್.ಪಿ ಅವರಿಗೆ ಸೂಕ್ತ ತನಿಖೆ ನಡೆಸಲು ತಿಳಿಸಿದ್ದು, ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಹೇಳಿದರು. ಎ.ಎಸ್ಪಿ ಕುಮಾರಚಂದ್ರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!