Thursday, February 27, 2025
Thursday, February 27, 2025

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಕೊಲೊರೆಕ್ಟಲ್ ಕ್ಯಾನ್ಸರ್ ಜಾಗೃತಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಕೊಲೊರೆಕ್ಟಲ್ ಕ್ಯಾನ್ಸರ್ ಜಾಗೃತಿ

Date:

ಮಣಿಪಾಲ, ಮಾ.8: ಮಾರ್ಚ್ ತಿಂಗಳನ್ನು ಕೊಲೊರೆಕ್ಟಲ್ ಕ್ಯಾನ್ಸರ್ (ದೊಡ್ಡ ಕರುಳು ಮತ್ತು ಗುದನಾಳ ಸಂಬಂಧಿತ) ಜಾಗೃತಿ ಮಾಸವನ್ನಾಗಿ ರಾಷ್ಟ್ರೀಯವಾಗಿ ಆಚರಿಸಲಾಗುತ್ತದೆ. ಈ ಪ್ರಯುಕ್ತ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಕೊಲೊರೆಕ್ಟಲ್ ಕ್ಯಾನ್ಸರ್ ಜಾಗೃತಿ ಜಾಗೃತಿ ಮಾತು ಮತ್ತು ಮಾಹಿತಿ ಕೈಪಿಡಿ ಹಾಗೂ ವಿಶೇಷ ರಿಯಾಯಿತಿ ದರದ ಪ್ಯಾಕೇಜ್ ಬಿಡುಗಡೆ ಮಾಡಲಾಯಿತು. ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾಸ್ಟ್ರೋ ಎಂಟೆರೊಲೊಜಿ ವಿಭಾಗದ ಪ್ರಾದ್ಯಾಪಕರು ಮತ್ತು ಮುಖ್ಯಸ್ಥರು ಹಾಗೂ ಉಪವೈದ್ಯಕೀಯ ಅಧೀಕ್ಷಕರಾದ ಡಾ.ಶಿರನ್ ಶೆಟ್ಟಿ, ಕೊಲೊರೆಕ್ಟಲ್ ಕ್ಯಾನ್ಸರ್, ಕೋಲನ್ (ದೊಡ್ಡ ಕರುಳು) ಅಥವಾ ಗುದನಾಳದಲ್ಲಿ ಸಂಭವಿಸುತ್ತದೆ. ಜೀವಕೋಶಗಳು ಅಸಹಜವಾದಾಗ ಮತ್ತು ನಿಯಂತ್ರಣವಿಲ್ಲದೆ ವಿಭಜಿಸಿ, ಗೆಡ್ಡೆ ಎಂದು ಕರೆಯಲ್ಪಡುವ ದ್ರವ್ಯರಾಶಿಯನ್ನು ರೂಪಿಸುತ್ತವೆ.

ಭಾರತದಲ್ಲಿ, ಮಹಿಳೆಯರಿಗೆ ಹೋಲಿಸಿದರೆ ಪುರುಷರಲ್ಲಿ ಕರುಳಿನ ಕ್ಯಾನ್ಸರ್ ಮತ್ತು ಗುದನಾಳದ ಕ್ಯಾನ್ಸರ್ ನ ಪ್ರಮಾಣವು ಹೆಚ್ಚಾಗಿರುತ್ತದೆ. ಕೊಲೊರೆಕ್ಟಲ್ ಕ್ಯಾನ್ಸರ್ ಮರಣಕ್ಕೆ ಕಾರಣವಾಗಿರುವ ಕ್ಯಾನ್ಸರ್ ಗಳಲ್ಲಿ ಎರಡನೇ ಸ್ಥಾನದಲ್ಲಿದೆ, ಕೊಲೊರೆಕ್ಟಲ್ ಕ್ಯಾನ್ಸರ್ ಅನ್ನು ತಡೆಗಟ್ಟಬಹುದು, ಕೊಲೊನೋಸ್ಕೋಪಿ ಇದನ್ನು ಪತ್ತೆ ಹಚ್ಚಲು ಇರುವ ಸೂಕ್ತ ಪರೀಕ್ಷಾ ವಿಧಾನವಾಯಿದೆ. ಆದ್ದರಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಈ ತಿಂಗಳ 31 ದಿನಾಂಕದವರೆಗೆ ವಿಶೇಷ ರಿಯಾಯಿತಿಯಾಗಿ 4999 ರೂಪಾಯಿ ದರದಲ್ಲಿ ಕೊಲೊನೋಸ್ಕೋಪಿ ಮತ್ತು ಅವಶ್ಯಕ ರಕ್ತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ, ಕಾರ್ಕಳ ಡಾ. ಟಿಎಂಪೈ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ, ಮಾರ್ಕೆಟಿಂಗ್ ಮುಖ್ಯಸ್ಥ ಸಚಿನ್ ಕಾರಂತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!