Wednesday, February 26, 2025
Wednesday, February 26, 2025

ಮಹಿಳಾ ದಿನಾಚರಣೆ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಶಾಂತಾ ವಿ ಆಚಾರ್ಯ ರವರಿಗೆ ಸನ್ಮಾನ

ಮಹಿಳಾ ದಿನಾಚರಣೆ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಶಾಂತಾ ವಿ ಆಚಾರ್ಯ ರವರಿಗೆ ಸನ್ಮಾನ

Date:

ಉಡುಪಿ, ಮಾ. 8: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶಾಂತಾ ವಿ ಆಚಾರ್ಯ ರವರಿಗೆ ಅವರ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಬ್ಯಾಂಕಿನ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಮಾತನಾಡಿ, ಶಾಂತಾ ವಿ. ಆಚಾರ್ಯ ರವರು ಸಾಮಾಜಿಕ ಕಾರ್ಯಕರ್ತೆಯಾಗಿ, ನಗರಸಭೆ ಸದಸ್ಯರಾಗಿ ಸಾಮಾಜಿಕ, ಧಾರ್ಮಿಕ, ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಕಾರ್ಯವೈಖರಿಯ ಮೂಲಕ ಗುರುತಿಸಿಕೊಂಡಿದ್ದಾರೆ.

ಗೈಡ್ಸ್ ಸಂಸ್ಥೆಯ ರಾಜ್ಯ ಆಯುಕ್ತರಾಗಿ ಸೇವೆ ಸಲ್ಲಿಸಿ, ರಾಜ್ಯ ಕಂಡ ಶ್ರೇಷ್ಠ ರಾಜಕೀಯ ಮುತ್ಸದ್ದಿ ದಿ| ವಿ. ಎಸ್. ಆಚಾರ್ಯ ರವರ ಎಲ್ಲಾ ಕಾರ್ಯ ಚಟುವಟಕೆಗಳಿಗೆ ಸಹಧರ್ಮಿಣಿಯಾಗಿ ಪ್ರೋತ್ಸಾಹಿಸುವ ಮೂಲಕ ನಮಗೆಲ್ಲಾ ಆದರ್ಶಪ್ರಾಯರಾಗಿರುವ ಶಾಂತಾ ವಿ ಆಚಾರ್ಯರನ್ನು ಬ್ಯಾಂಕಿನ ವತಿಯಿಂದ ಗೌರವಿಸಲು ಹೆಮ್ಮೆ ಎನಿಸುತ್ತದೆ ಎಂದರು.

ಬ್ಯಾಂಕಿನ ನಿರ್ದೇಶಕರಾದ ನಾರಾಯಣ ಟಿ. ಅಮೀನ್, ವಿನಯ ಕರ್ಕೇರ, ವನಜ ಪುತ್ರನ್, ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕ ಜಗದೀಶ್ ಮೊಗವೀರ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶಾರಿಕಾ ಕಿರಣ್, ಸಿಬ್ಬಂದಿ ವಿಜೇತ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!