Home ಸುದ್ಧಿಗಳು ಪ್ರಾದೇಶಿಕ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

455
0

ಉಡುಪಿ, ಮಾ. 8: ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮಾರ್ಚ್ 14 ರಂದು ಬೈಂದೂರು ಪ್ರವಾಸಿ ಮಂದಿರ, ಮಾ. 16 ರಂದು ಕಾರ್ಕಳ ಪ್ರವಾಸಿ ಮಂದಿರ ಹಾಗೂ ಮಾ. 21 ರಂದು ಬ್ರಹ್ಮಾವರದ ಚಾಂತಾರು ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಲೋಕಾಯುಕ್ತ ಕಾಯ್ದೆಯಡಿ ದಾಖಲಾಗುವ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.