Sunday, September 22, 2024
Sunday, September 22, 2024

ಬ್ರಹ್ಮಾವರ: ಜನೌಷಧಿ ದಿವಸ ಮತ್ತು ಮಹಿಳಾ ದಿನಾಚರಣೆ

ಬ್ರಹ್ಮಾವರ: ಜನೌಷಧಿ ದಿವಸ ಮತ್ತು ಮಹಿಳಾ ದಿನಾಚರಣೆ

Date:

ಉಡುಪಿ, ಮಾ. 8: ಸಮುದಾಯ ಆರೋಗ್ಯ ಕೇಂದ್ರ, ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಹಾಗೂ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ಸಹಯೋಗದೊಂದಿಗೆ ಬ್ರಹ್ಮಾವರದ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದಲ್ಲಿ ಜನ ಔಷಧಿ ದಿವಸ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಮಾತನಾಡಿ, ಜನೌಷಧಿಯು ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ವರದಾನವಾಗಿದ್ದು, ಶೇ. 50-90 ರ ವರೆಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಔಷಧಿಗಳನ್ನು ಸಾರ್ವಜನಿಕರಿಗೆ ನೀಡಿ ಜನ ಔಷಧಿ ಕೇಂದ್ರಗಳು ಬಹುಜನೋಪಯೋಗಿಯಾಗಿ ಹೊರ ಹೊಮ್ಮಿದೆ.

ತಳ ಮಟ್ಟದ ಜನರಿಗೂ ಈ ಯೋಜನೆಯ ಕುರಿತು ಅರಿವು ಮೂಡಿಸುವಲ್ಲಿ ಆಶಾ ಕಾರ್ಯಕರ್ತೆ ಮತ್ತು ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ ಎಂದರು. ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಹೇಶ್ ಐತಾಳ್, ಜನ ಔಷಧಿ ಬಗ್ಗೆ ಮಾಹಿತಿ ನೀಡಿದರು.

ಆಶಾನಿಲಯ ವಿಕಲಚೇತನ ವಿದ್ಯಾರ್ಥಿಗಳ ಶಾಲೆಯ ನಿವೃತ್ತ ಪ್ರಿನ್ಸಿಪಾಲ್ ಜಯ ವಿಜಯ, ಎನ್.ಎಸ್.ಎಸ್ ಅಧ್ಯಾಪಕ ರಘುರಾಮ್ ಶೆಟ್ಟಿ, ಜಯಂಟ್ಸ್ನನಿರ್ದೇಶಕ ಮಿಲ್ಟನ್ ಓಲಿವೆರಾ, ಅಣ್ಣಯ್ಯ ದಾಸ್, ಶ್ರೀನಾಥ್ ಕೋಟ, ವಿವೇಕ್ ಕಾಮತ್, ರೊನಾಲ್ಡ್, ಫಾರ್ಮಸಿಸ್ಟ್ ವಿಲ್ಸನ್, ಡೋರಿಸ್ ಡಿ ಸೋಜ, ಅಧ್ಯಾಪಕಿ ಮಮತಾ, ಎಸ್.ಎಂ.ಎಸ್ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆಯರನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹಿಳೆಯರನ್ನು ಸನ್ಮಾನಿಸಲಾಯಿತು. ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ ಸ್ವಾಗತಿಸಿ, ಮಧುಸೂದನ್ ಹೇರೂರು ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!