Sunday, February 23, 2025
Sunday, February 23, 2025

ಸ್ವಾಸ್ಥ್ಯ ಸಮಾಜ ಪರಿಕಲ್ಪನೆ ಸಂಘಟನೆಗಳಿಂದ ಸಾಕಾರ: ರಾಜು ಪೂಜಾರಿ

ಸ್ವಾಸ್ಥ್ಯ ಸಮಾಜ ಪರಿಕಲ್ಪನೆ ಸಂಘಟನೆಗಳಿಂದ ಸಾಕಾರ: ರಾಜು ಪೂಜಾರಿ

Date:

ಕೋಟ: ಇತ್ತೀಚಿನ ದಿನಗಳಲ್ಲಿ ಸಂಘಟನೆಗಳು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಶ್ರಮಿಸುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಚತೆ, ಶೈಕ್ಷಣಿಕ, ಸೇರಿದಂತೆ ಸಮಾಜಮುಖಿ ಕಾರ್ಯಗಳಲ್ಲಿ
ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ.

ಯುವವಾಹಿನಿ ಘಟಕವು ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸಂಘಟನಾತ್ಮಕವಾಗಿ ಸಕ್ರಿಯವಾಗಿ ತೊಡಗಿಸಿಕೊಂಡು ಇನ್ನಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಾಗುವುದು ಎಂದು ಯುವವಾಹಿನಿ (ರಿ.) ಯಡ್ತಾಡಿ ಘಟಕದ ಅಧ್ಯಕ್ಷ ರಾಜು ಪೂಜಾರಿ ಹೇಳಿದರು.

ಅವರು ಯಡ್ತಾಡಿಯ ಸಣಗಲ್ಲುವಿನಲ್ಲಿ ನಡೆದ ಯುವವಾಹಿನಿ (ರಿ.) ಯಡ್ತಾಡಿ ಘಟಕದ ವತಿಯಿಂದ ಸುನೀಲ್ ಪೂಜಾರಿ ಸಣಗಲ್ಲು ಅವರ ಮನೆ ವಠಾರದಲ್ಲಿ ನಡೆದ ಸಂಘಟನೆಗಾಗಿ ನಮ್ಮ ನಡೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೂಳೂರು ಯುವವಾಹಿನಿ ಘಟಕದ ವತಿಯಿಂದ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ಯಡ್ತಾಡಿ ಯುವವಾಹಿನಿಯ ಮಹಿಳಾ ವಾಲಿಬಾಲ್ ಸದಸ್ಯರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ವಡ್ಡರ್ಸೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಗಿರಿಜಾ ಪೂಜಾರ್ತಿ, ಸಂತೋಷ್ ಪೂಜಾರಿ ಸಣಗಲ್ಲು ಉಪಸ್ಥಿತರಿದ್ದರು.

ಸೋಮಪ್ಪ ಸುವರ್ಣ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಅಜಿತ್ ಕುಮಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!