Monday, September 23, 2024
Monday, September 23, 2024

ಹಸಿ ತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿ: ಸುಮಿತ್ರಾ ಆರ್ ನಾಯಕ್

ಹಸಿ ತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿ: ಸುಮಿತ್ರಾ ಆರ್ ನಾಯಕ್

Date:

ಉಡುಪಿ, ಮಾ. 13: ತ್ಯಾಜ್ಯ ಎಂಬುದು ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಗ್ರಾಮ ಪಂಚಾಯತಿಗಳಿಗೆ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಹಸಿ ತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿದರೆ ಈ ಸಮಸ್ಯೆಯನ್ನು ತಡೆಗಟ್ಟಬಹುದು ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಹೇಳಿದರು. ಅವರು ಸೋಮವಾರ ನಗರದ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ, ನಗರಸಭೆ ಉಡುಪಿ ಹಾಗೂ ಸಿತಾರ ಸಂಸ್ಥೆ ದಾವಣಗೆರೆ ಇವರ ಸಹಯೋಗದೊಂದಿಗೆ ನಡೆದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಬಲ್ಕ್ ವೆಸ್ಟ್ ಸಮರ್ಪಕ ವಿಲೇವಾರಿ ಸಂಬಂಧಿಸಿದಂತೆ ಮಾಹಿತಿ ಕಾರ್ಯಾಗಾರ ಹಾಗೂ ಸಾವಯವ ಗೊಬ್ಬರ ಪರಿವರ್ತನಾ ಯಂತ್ರಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರತಿದಿನ 35 ರಿಂದ 40 ಟನ್‌ಗಳಷ್ಟು ಹಸಿ ತಾಜ್ಯ ಬರುತ್ತಿದ್ದು, ಕರ್ವಾಲು ಗ್ರಾಮದಲ್ಲಿ ಹಸಿ ತ್ಯಾಜ್ಯ ಮತ್ತು ಒಣ ತ್ಯಾಜ್ಯವನ್ನು ಬೇರೆ ಬೇರೆಯಾಗಿ ವಿಂಗಡಿಸಲಾಗುತ್ತಿದ್ದು, ಹಸಿ ತ್ಯಾಜ್ಯ ಬಹುದೊಡ್ಡ ಸಮಸ್ಯೆಯಾಗಿದೆ. ಉಡುಪಿಯ ದೊಡ್ಡ ದೊಡ್ಡ ಹೋಟೆಲ್‌ಗಳು, ಕಲ್ಯಾಣ ಮಂಟಪಗಳು ತಮ್ಮಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ತಾವೇ ವಿಲೇವಾರಿ ಮಾಡುವಂತದ್ದು ಬಹಳ ಉತ್ತಮ ಅಥವಾ ಅದನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿ ಗೋಬರ್ ಗ್ಯಾಸನ್ನು ತಯಾರಿಸಬಹುದು. ಈ ಕಾರ್ಯಾಗಾರದಲ್ಲಿ ನಗರಸಭೆಯ ತ್ಯಾಜ್ಯ ನಿರ್ವಹಣೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದರು.

ನಗರಸಭೆಯ ಪೌರಾಯುಕ್ತ ಡಾ.ಉದಯ ಶೆಟ್ಟಿ ಮಾತನಾಡಿ, ನಗರಸಭೆಯಲ್ಲಿ ಪ್ರತಿದಿನ ಸುಮಾರು 70 ಟನ್‌ಗಳಷ್ಟು ಕಸ ಉತ್ಪತ್ತಿಯಾಗುತ್ತಿದೆ. ಘನ ತ್ಯಾಜ್ಯ ವಿಲೇವಾರಿ ಉಡುಪಿ ನಗರಕ್ಕಷ್ಟೇ ಅಲ್ಲದೇ ದೇಶಕ್ಕೆ ದೊಡ್ಡ ಸಮಸ್ಯೆಯಾಗಿದೆ. ಇದರ ಸಮರ್ಪಕ ನಿರ್ವಹಣೆಗೆ ಬೀಡಿನಗುಡ್ಡೆ ಹಾಗೂ ಕರಾವಳಿ ಬೈಪಾಸ್‌ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳಿದ್ದು, ಇತ್ತೀಚೆಗೆ ಕರ್ವಾಲು ನಲ್ಲಿ ಎಂ.ಆರ್.ಎಫ್ ಘಟಕವನ್ನೂ ಆರಂಭಿಸಲಾಗಿದೆ ಎಂದರು.

ಕಟಪಾಡಿಯ ವಿಜಯ್ ಇಂಡಸ್ಟ್ರಿಯ ವ್ಯವಸ್ಥಾಪಕ ನಿರ್ದೇಶಕ ಸತ್ಯೇಂದ್ರ ಪೈ ಹಸಿ ತ್ಯಾಜ್ಯದಿಂದ ಸುಲಭವಾಗಿ ಸಿಎನ್‌ಜಿ ಉತ್ಪತ್ತಿ ಮತ್ತು ಸಾವಯವ ಗೊಬ್ಬರ ಮಾಡುವ ವಿಧಾನದ ಬಗ್ಗೆ, ಉಡುಪಿ ನಗರಸಭೆಯ ಸ್ವಚ್ಛತಾ ರಾಯಭಾರಿ ಜೋಸೆಪ್ ಜಿ ಎಂ ರೆಬೆಲ್ಲೋ ಮನೆ ಹಂತದಲ್ಲಿ ಕಸ ವಿಂಗಡಣೆ ವಿಧಾನ ಹಾಗೂ ಕಿರ್ಲೋಸ್ಕರ್ ಆಯಿಲ್ ಲಿಮಿಟೆಡ್‌ನ ರಕ್ಷಿತ್, ಗ್ರೀನ್ ರಿಚ್ ಗ್ರೋ ಇಂಡಿಯಾ ಲಿಮಿಟೆಡ್‌ನ ಹರೀಶ್ ಹಸಿ ತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿಸುವ ಯಂತ್ರದ ಪ್ರಾತ್ಯಕ್ಷಿಕೆ ನೀಡಿದರು.

ಮಿತ್ರ ಪ್ರಿಯ ನರ್ಸಿಂಗ್ ಹೋಂನ ನಿವೃತ್ತ ಆರೋಗ್ಯ ಅಧಿಕಾರಿ ಡಾ. ಬಿ.ಜಿ.ಕೆ ಆಚಾರ್ಯ, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಜಯಂತಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ನಗರಸಭೆ ಪರಿಸರ ಅಭಿಯಂತರೆ ಸ್ನೇಹಾ ಕೆ ಎಸ್ ಸ್ವಾಗತಿಸಿ, ಎನ್ ನಾಗರಾಜು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!