Home ಸುದ್ಧಿಗಳು ಪ್ರಾದೇಶಿಕ ಕೋಟ ಲಾಠಿ ಚಾರ್ಜ್ ಪ್ರಕರಣ- ಕೋಟ ಎಸ್.ಐ ಅಮಾನತು

ಕೋಟ ಲಾಠಿ ಚಾರ್ಜ್ ಪ್ರಕರಣ- ಕೋಟ ಎಸ್.ಐ ಅಮಾನತು

770
0

ಉಡುಪಿ: ಕೋಟತಟ್ಟುವಿನ ಕೊರಗ ಸಮುದಾಯದ ಮನೆಯಲ್ಲಿ ಮೆಹಂದಿ ಕಾರ್ಯಕ್ರಮದ ಸಂದರ್ಭದಲ್ಲಿ ಪೊಲೀಸರ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪಿ.ಎಸ್.ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ಪಶ್ಚಿಮ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ. ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಐದು ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಹೇಳಿದ್ದಾರೆ.

ಲಾಠಿ ಚಾರ್ಜ್ ಘಟನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಘಟನೆಯನ್ನು ಖಂಡಿಸಿ ಲಾಠಿ ಚಾರ್ಜ್ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ಪಕ್ಷಾತೀತವಾಗಿ ಮುಖಂಡರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಘಟನೆಯನ್ನು ಖಂಡಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.