Friday, May 15, 2026
Friday, May 15, 2026

ಕೋಟ ಲಾಠಿ ಚಾರ್ಜ್ ಪ್ರಕರಣ- ಕೋಟ ಎಸ್.ಐ ಅಮಾನತು

ಕೋಟ ಲಾಠಿ ಚಾರ್ಜ್ ಪ್ರಕರಣ- ಕೋಟ ಎಸ್.ಐ ಅಮಾನತು

Date:

ಉಡುಪಿ: ಕೋಟತಟ್ಟುವಿನ ಕೊರಗ ಸಮುದಾಯದ ಮನೆಯಲ್ಲಿ ಮೆಹಂದಿ ಕಾರ್ಯಕ್ರಮದ ಸಂದರ್ಭದಲ್ಲಿ ಪೊಲೀಸರ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪಿ.ಎಸ್.ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ಪಶ್ಚಿಮ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ. ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಐದು ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಹೇಳಿದ್ದಾರೆ.

ಲಾಠಿ ಚಾರ್ಜ್ ಘಟನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಘಟನೆಯನ್ನು ಖಂಡಿಸಿ ಲಾಠಿ ಚಾರ್ಜ್ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ಪಕ್ಷಾತೀತವಾಗಿ ಮುಖಂಡರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಘಟನೆಯನ್ನು ಖಂಡಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎರಡನೇ ಆವೃತ್ತಿಯ ಎಸ್.ಆರ್.ಎಸ್ ಪ್ರೀಮಿಯರ್ ಲೀಗ್ 2026

ಬಾರಕೂರು, ಮೇ 15: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ...

ಗೋಪಾಲಪುರ ಗರಡಿಮಜಲು ರಸ್ತೆಯ ಬದಿ ನಿರಂತರವಾಗಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳು

ಉಡುಪಿ, ಮೇ 14: ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ರಾಜ್ಯಮಟ್ಟದಲ್ಲೇ ಹೆಸರು ಗಳಿಸಿದೆ....

ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

ಉಡುಪಿ, ಮೇ 14: ಜೀ ಕನ್ನಡ ವಾಹಿನಿಯ ಮಹರ್ಷಿವಾಣಿ ಖ್ಯಾತಿಯ ಡಾ....

ಕಾಳಾವರ ವರದರಾಜ ಕಾಲೇಜು ವಾರ್ಷಿಕೋತ್ಸವ

ಕೋಟೇಶ್ವರ, ಮೇ 14: ದೃಢತೆಯಿಂದ ಕೂಡಿದ ಅವಿರತವಾದ ಪರಿಶ್ರಮ, ತಾಳ್ಮೆ ಮತ್ತು...
error: Content is protected !!