Tuesday, September 24, 2024
Tuesday, September 24, 2024

ಉಪ್ಪೂರು: ಫಲಾನುಭವಿಗಳಿಗೆ ಖಾಯಂ ನಿವೇಶನ ಹಕ್ಕುಪತ್ರ ವಿತರಣೆ

ಉಪ್ಪೂರು: ಫಲಾನುಭವಿಗಳಿಗೆ ಖಾಯಂ ನಿವೇಶನ ಹಕ್ಕುಪತ್ರ ವಿತರಣೆ

Date:

ಉಪ್ಪೂರು, ಮಾ. 21: ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ 55 ಕುಟುಂಬಗಳಿಗೆ 94/ಸಿಸಿ ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಮಂಗಳವಾರ ಗೆಳೆಯರ ಬಳಗದ ವಠಾರದಲ್ಲಿ ನಡೆಯಿತು.

ಶಾಸಕ ಕೆ. ರಘುಪತಿ ಭಟ್ ಹಕ್ಕು ಪತ್ರಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು, ಉಪ್ಪೂರು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರು ಈ ಕುಟುಂಬಗಳಿಗೆ ಗೋಮಾಳದ ಸಮಸ್ಯೆಯಿಂದಾಗಿ ಹಕ್ಕುಪತ್ರ ನೀಡಲು ಸಮಸ್ಯೆ ಉಂಟಾಗಿರುತ್ತದೆ. ವಿಶೇಷ ಪ್ರಕರಣಗಳ ಅಡಿ ಗೋಮಾಳವನ್ನು ವಿರಹಿತಗೊಳಿಸಿ 94/ಸಿಸಿ ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಗಿದೆ ಎಂದರು.

ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಜು ಪೂಜಾರಿ, ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್, ಗ್ರಾಮ ಲೆಕ್ಕಾಧಿಕಾರಿಗಳಾದ ಚಂದ್ರ ಹಾಗೂ ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!