Thursday, February 27, 2025
Thursday, February 27, 2025

ಮಾ. 26- ಮಲಬಾರ್ ವಿಶ್ವರಂಗ ಪುರಸ್ಕಾರ 2023

ಮಾ. 26- ಮಲಬಾರ್ ವಿಶ್ವರಂಗ ಪುರಸ್ಕಾರ 2023

Date:

ಉಡುಪಿ, ಮಾ. 23: ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಭಾನುವಾರ ಮಾ. 26ರಂದು ಸಂಜೆ 4:00 ಕ್ಕೆ ಉಡುಪಿಯ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ‘ಮಲಬಾರ್ ವಿಶ್ವರಂಗ ಪುರಸ್ಕಾರ 2023’ ಪ್ರದಾನ ಮಾಡಲಾಗುವುದು.

ರಾಜ್ಯ ಮತ್ತು ಹೊರ ರಾಜ್ಯದ ಐವರು ಹಿರಿಯ ರಂಗಕರ್ಮಿಗಳಾದ ಮೂರ್ತಿ ದೇರಾಜೆ (ರಂಗ ನಿರ್ದೇಶಕರು), ಶೋಭಾ ವೆಂಕಟೇಶ್, ಬೆಂಗಳೂರು (ಮಕ್ಕಳ ರಂಗಭೂಮಿ), ಎಂ.ಎಸ್. ಭಟ್ ಉಡುಪಿ (ರಂಗ ನಟ), ಮೋಹನ್ ಮಾರ್ನಾಡ್ ಮುಂಬೈ (ರಂಗ ನಟ ಹೊರ ರಾಜ್ಯ), ಪ್ರಕಾಶ್ ನೊರೋನ್ಹ ಪಾಂಬೂರು (ರಂಗ ಸಂಘಟಕರು) ಇವರಿಗೆ ಮಾರ್ಚ್ 26ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2023’ ಪ್ರದಾನ ಮಾಡಲಾಗುವುದು.

ಸಮಾರಂಭದ ಸಭಾಧ್ಯಕ್ಷತೆಯನ್ನು ನಾಡಿನ ಹಿರಿಯ ವಿಮರ್ಶಕ ಪ್ರೊ. ಮುರಳೀಧರ ಉಪಾಧ್ಯಾ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ರಂಗಕರ್ಮಿ ಲಾವಣ್ಯ ಬೈಂದೂರಿನ ಗಣೇಶ್ ಕಾರಂತ್ ಹಾಗೂ ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ತಲ್ಲೂರು ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿರುತ್ತಾರೆ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಯುವ ಸಂಚಯದ ಕಲಾವಿದೆ ಪವಿತ್ರ ನಾಯ್ಕ ಅವರಿಂದ ಏಕವ್ಯಕ್ತಿ ರಂಗ ಪ್ರಯೋಗ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!