Thursday, February 27, 2025
Thursday, February 27, 2025

ನಿಟ್ಟೆ ವಿಶ್ವವಿದ್ಯಾನಿಲಯದ (ಸ್ವಾಯತ್ತ) ಸಂಶೋಧನಾ ಕೇಂದ್ರವಾಗಿ ತೆಂಕನಿಡಿಯೂರು ಕಾಲೇಜು ಆಯ್ಕೆ

ನಿಟ್ಟೆ ವಿಶ್ವವಿದ್ಯಾನಿಲಯದ (ಸ್ವಾಯತ್ತ) ಸಂಶೋಧನಾ ಕೇಂದ್ರವಾಗಿ ತೆಂಕನಿಡಿಯೂರು ಕಾಲೇಜು ಆಯ್ಕೆ

Date:

ಮಲ್ಪೆ, ಮಾ. ೨೫: 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಮಂಗಳೂರು ವಿ.ವಿಯ ಸ್ನಾತಕೋತ್ತರ ಮತ್ತು ಪದವಿ ವಿಭಾಗದಲ್ಲಿ 9 ರ‍್ಯಾಂಕ್ ಗಳಿಸಿದ ಹಾಗೂ ಕಳೆದ ಐದು ಶೈಕ್ಷಣಿಕ ವರ್ಷಗಳ ರಾಜ್ಯಾದ್ಯಂತ ಇರುವ 431 ಸರಕಾರಿ ಕಾಲೇಜುಗಳಲ್ಲಿಯೇ ಅತ್ಯಂತ ಉತ್ತಮ ಫಲಿತಾಂಶಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆಯಿಂದ ಡಿಸೆಂಬರ್ 25 ರ ಸುಶಾಸನ ದಿನಾಚರಣೆಯಂದು ಗೌರವಿಸಲ್ಪಟ್ಟ ಉಡುಪಿ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ವಿಶ್ವವಿದ್ಯಾನಿಲಯಗಳಲ್ಲಿ ಗುರುತಿಸಿಕೊಂಡ ನಿಟ್ಟೆ ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರವು ಮಂಜೂರಾಗಿರುತ್ತದೆ.

ಸ್ವಾಯತ್ತ ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರವಾಗಿ ಆಯ್ಕೆಯಾದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಏಕೈಕ ಸರಕಾರಿ ಕಾಲೇಜು ಇದಾಗಿರುತ್ತದೆ. ಪಿ.ಹೆಚ್.ಡಿ ಸಂಶೋಧನೆಯನ್ನು ಮಾಡಲು ಮುಂದಿನ 4 ವರ್ಷಗಳ ಅವಧಿಗೆ ಅನುಮತಿಯನ್ನು ನಿಟ್ಟೆ ವಿಶ್ವವಿದ್ಯಾನಿಲಯವು ಅನುಮತಿ ನೀಡಿದ್ದು, ಕಾಲೇಜಿನಲ್ಲಿ ಇತಿಹಾಸ, ಅರ್ಥಶಾಸ್ತ್ರ, ಇಂಗ್ಲೀಷ್, ಕನ್ನಡ, ಸಮಾಜಶಾಸ್ತ್ರ, ಸಮಾಜಕಾರ್ಯ ಹಾಗೂ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ಕೋರ್ಸುಗಳ ಜೊತೆಗೆ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ ಹಾಗೂ ಬಿ.ಎಸ್.ಡಬ್ಲ್ಯೂ ಪದವಿ ವಿಭಾಗಗಳಿದ್ದು, 2006 ರಿಂದ ಈ ವರೆಗೆ ಸ್ನಾತಕೋತ್ತರ ಹಾಗೂ ಪದವಿ ವಿಭಾಗಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಒಟ್ಟು 46 ರ‍್ಯಾಂಕುಗಳನ್ನು ಪಡೆದು ಉನ್ನತ ಸಾಧನೆ ಮಾಡಿದ ಸಂಸ್ಥೆಯಾಗಿದ್ದು, ಕಾಲೇಜಿಗೆ ಸಂಶೋಧನಾ ಕೇಂದ್ರವನ್ನು ಮಂಜೂರು ಮಾಡಿದ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಹಾಗೂ ಕುಲಸಚಿವರಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ ಹಾಗೂ ಬೋಧಕ ಬೋಧಕೇತರರ ವೃಂದ ಹಾಗೂ ವಿದ್ಯಾರ್ಥಿಗಳು ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!