Friday, September 20, 2024
Friday, September 20, 2024

ಮಹಿಳೆಯರಿಗೆ ಸೂಕ್ತ ವೇದಿಕೆ ದೊರಕಿದಲ್ಲಿ ಇನ್ನಷ್ಟು ಸಾಧನೆ ಸಾಧ್ಯ: ಪೂರ್ಣಿಮಾ

ಮಹಿಳೆಯರಿಗೆ ಸೂಕ್ತ ವೇದಿಕೆ ದೊರಕಿದಲ್ಲಿ ಇನ್ನಷ್ಟು ಸಾಧನೆ ಸಾಧ್ಯ: ಪೂರ್ಣಿಮಾ

Date:

ಕೋಟ, ಮಾ. 31: ಮಹಿಳೆಯರು ಸ್ವಾವಲಂಬನೆಯ ಜೀವನಕ್ಕೆ ಹೆಚ್ಚು ಒತ್ತು ಕೊಟ್ಟು, ಎಲ್ಲ ಕ್ಷೇತ್ರಗಳಲ್ಲಿಯೂ ತನ್ನನ್ನು ತೊಡಗಿಸಿಕೊಂಡು ಮಾದರಿಯಾಗಬೇಕು. ಮಹಿಳೆಯರಿಗೆ ಸೂಕ್ತ ವೇದಿಕೆ ದೊರಕಿದರೆ ಇನ್ನಷ್ಟು ಸಾಧನೆ ಸಾಧ್ಯ. ಕಾರಂತ ಥೀಮ್ ಪಾರ್ಕ್ ನಲ್ಲಿ ಮಹಿಳೆಯರ ದಿನಾಚರಣೆ ಅರ್ಥಪೂರ್ಣವಾಗಿ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹೇಳಿದರು.

ಅವರು ಕೋಟದ ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ.)ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಸಿಂಧೂರ ಸಂಜೀವಿನಿ ಸಂಘ, ಕೋಟತಟ್ಟು, ಜೆ.ಸಿ.ಐ ಕಲ್ಯಾಣಪುರ, ನೆನಪು ಮೂವೀಸ್ ಕೋಟ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಕವಿಗೋಷ್ಠಿ, ವಿಚಾರ ಸಂಕಿರಣ, ಡಾ. ಕಾರಂತ ಸಾಧಕ ಸ್ತ್ರೀ ಪುರಸ್ಕಾರ ಪ್ರದಾನ ಕಾರ್ಯಕ್ರಮ ಅಮ್ಮಾ… ಹಚ್ಚಿದೊಂದು ಹಣತೆ ಇನ್ನೂ ಬೆಳಗಿದೆ(ಅಭಿಮಾನದ ಗುಣಗಾನ) ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೀತಾ ಆನಂದ್ ಸಿ ಕುಂದರ್, ಮಹಿಳೆಯರು ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದರು. ವೇದಿಕೆಯಲ್ಲಿ ಡಾ. ಶಿವರಾಮ ಕಾರಂತ ಮಹಿಳಾ ಸಾಧಕ ಪುರಸ್ಕಾರವನ್ನು ರೇವತಿ ಶೆಟ್ಟಿ ಮಣೂರು ಪಡುಕೆರೆ, ಸುಧಾ ಕದ್ರಿಕಟ್ಟು, ತನುಜಾ ಕೋಟೇಶ್ವರ, ನಿಶಾ ಸಾಲಿಗ್ರಾಮ, ವೀಣಾ ನಾಯಕ್, ಮಾಲಿನಿ ರಮೇಶ್, ಸುಮನ ಹೇರ್ಳೆ, ಸುಶ್ಮಿತಾ ಪಾರಂಪಳ್ಳಿ, ಸ್ಪೂರ್ತಿ, ಲಲಿತಾ ನಾಯ್ರಿ, ಶೋಭಾ ಗಾಣಿಗ, ಸುಪ್ರೀತಾ ಪುರಾಣಿಕ್, ಪ್ರತಿಮಾ ಯಡ್ತಾಡಿ, ಚೈತ್ರಾ ಆಚಾರ್ಯ ಕೋಟ ಅವರಿಗೆ ಪ್ರದಾನ ಮಾಡಲಾಯಿತು. ಕೋಟತಟ್ಟು ಗ್ರಾಮ ಪಂಚಾಯತ್ ಎಸ್‌ಎಲ್‌ಆರ್‌ಎಮ್ ಘಟಕದ ಮಹಿಳಾ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಟ್ರಸ್ಟಿಗಳಾದ ಸುಶೀಲಾ ಸೋಮಶೇಖರ್, ಸುಬ್ರಾಯ ಆಚಾರ್ಯ, ಡಾ. ಶಿವರಾಮ ಕಾರಂತ ಅಧ್ಯಯನ ಸಂಶೋಧನ ಕೇಂದ್ರ ಸಾಲಿಗ್ರಾಮ ಅಧ್ಯಕ್ಷ ಗುರುರಾಜ್, ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಸಿಂಧೂರ ಸಂಜೀವಿನಿ ಸಂಘ, ಕೋಟತಟ್ಟು ಅಧ್ಯಕ್ಷೆ ಸಂಗೀತಾ, ಜೆ.ಸಿ.ಐ ಕಲ್ಯಾಣಪುರ ಅಧ್ಯಕ್ಷರಾದ ಅನಿತಾ ನರೇಂದ್ರ ಕುಮಾರ್, ಕಾರ್ಯದರ್ಶಿ ಲವಿನಾ ಲೂಯಿಸ್, ಜೆ.ಸಿ.ಐ ಮಹಿಳಾ ನಿರ್ದೇಶಕಿ ಶಾಲಿನಿ ಸುರೇಶ್ ಉಪಸ್ಥಿತರಿದ್ದರು. ಶಿಕ್ಷಕಿ ಸಾಹಿತಿ ಮಂಜುಳಾ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಮಹಿಳೆಯರಿಂದ ಕವಿಗೋಷ್ಠಿ, ಯುವ ಗಾಯಕಿ ಶ್ರಾವ್ಯ ಅಲ್ತಾರು ಅವರಿಂದ ಭಾವಗಾನ, ಚೇತನ್ ನೈಲಾಡಿ ತಂಡದವರಿಂದ ಹೆಂಗ್ಸ್ರ್ ಪಂಚೈತಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!