Friday, September 20, 2024
Friday, September 20, 2024

ಮಣಿಪಾಲ ಕೆ.ಎಂ.ಸಿ: ಬಾಯಿಯ ಆರೋಗ್ಯ ಜಾಗೃತಿ, ಶಿಕ್ಷಣ ಮತ್ತು ತಪಾಸಣಾ ಕಾರ್ಯಕ್ರಮ

ಮಣಿಪಾಲ ಕೆ.ಎಂ.ಸಿ: ಬಾಯಿಯ ಆರೋಗ್ಯ ಜಾಗೃತಿ, ಶಿಕ್ಷಣ ಮತ್ತು ತಪಾಸಣಾ ಕಾರ್ಯಕ್ರಮ

Date:

ಮಣಿಪಾಲ, ಏ. 17: ಏಪ್ರಿಲ್ ತಿಂಗಳನ್ನು ವಿಶ್ವಾದ್ಯಂತ ಬಾಯಿಯ ಕ್ಯಾನ್ಸರ್ ಜಾಗ್ರತಿ ಕ್ಯಾನ್ಸರ್ ಮಾಸವನ್ನಾಗಿ ಆಚರಿಸಲಾಗುತ್ತದೆ. ಬಾಯಿಯ ಕ್ಯಾನ್ಸರ್ ಬಾಯಿಯ ಮೇಲೆ ಪರಿಣಾಮ ಬೀರುವ ಕ್ಯಾನ್ಸರ್ ಆಗಿದೆ. ಇದು ಒಸಡುಗಳು, ನಾಲಿಗೆ ಅಥವಾ ತುಟಿಗಳು ಸೇರಿದಂತೆ ಯಾವುದೇ ಅಂಗಾಂಶದ ಮೇಲೆ ಬೆಳೆಯಬಹುದು. ಆರಂಭಿಕ ಪತ್ತೆ ಮತ್ತು ಚಿಕಿತ್ಸೆಯು ಗಮನಾರ್ಹವಾಗಿ ಫಲಿತಾಂಶಗಳನ್ನು ಸುಧಾರಿಸುತ್ತದೆ. ಇದರ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಏಪ್ರಿಲ್ 17ರಿಂದ 21ರವರೆಗೆ ಜಾಗೃತಿ, ಶಿಕ್ಷಣ ಮತ್ತು ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.

ಇದರ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಏರ್ಪಡಿಸಲಾಗಿತ್ತು. ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್ ಕಾರ್ಯಕ್ರಮ ಉದ್ಘಾಟಿಸಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮಾಹಿತಿ ಕರಪತ್ರ ಬಿಡುಗಡೆ ಮಾಡಿದರು.

ತಲೆ ಮತ್ತು ಕತ್ತಿನ ಶಸ್ತ್ರಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ದೇವರಾಜ್ ಕೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಮುಖಾಂಗ ಅಥವಾ ಬಾಯಿ ಪ್ರಮುಖ ಅಂಗಗಳಲ್ಲಿ ಒಂದು. ನಾವು ಸೇವಿಸುವ ಪ್ರತಿ ಪದಾರ್ಥಗಳು ಬಾಯಿಯ ಮೂಲಕವೇ ದೇಹ ಸೇರುತ್ತದೆ. ಆದ್ದರಿಂದ ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಮುಖ್ಯ.

ತಂಬಾಕು ಸೇವನೆ, ಮದ್ಯ ಸೇವನೆ, ಗುಟ್ಕಾ ಸೇವನೆ ಇತ್ಯಾದಿಗಳು ಬಾಯಿಯ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದರು. ಅಲ್ಲದೇ ಆರಂಭಿಕ ಹಂತದಲ್ಲಿ ಪತ್ತೆಹಚ್ಚುವುದರಿಂದಾಗುವ ಪ್ರಯೋಜನದ ಕುರಿತು ಮಾತನಾಡಿದರು. ಶಿಬಿರವು ಪ್ರತೀ ದಿನ ಇಂದಿನಿಂದ ಏಪ್ರಿಲ್ 21ರತನಕ ಬೆಳೆಗ್ಗೆ 10.00ರಿಂದ ಮದ್ಯಾಹ್ನ 1.00ರ ತನಕ ನಡೆಯಲಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಹೇಳಿದರು. ತಲೆ ಮತ್ತು ಕತ್ತಿನ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ. ಸುರೇಶ್ ಪಿಳ್ಳೈ, ಸಹಾಯಕ ಪ್ರಾಧ್ಯಾಪಕರಾದ ಡಾ. ಶಮಾ ಶೆಟ್ಟಿ, ಡಾ. ಕಿಂಜಲ್ ಶಂಕರ್ ಮಜುಮ್ದಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!