Friday, September 20, 2024
Friday, September 20, 2024

ಅಜ್ಜರಕಾಡು ಕಾಲೇಜು: ಮತದಾನ ಮಹತ್ವದ ಕುರಿತು ಉಪನ್ಯಾಸ

ಅಜ್ಜರಕಾಡು ಕಾಲೇಜು: ಮತದಾನ ಮಹತ್ವದ ಕುರಿತು ಉಪನ್ಯಾಸ

Date:

ಉಡುಪಿ, ಏ. 19: ಅಜ್ಜರಕಾಡಿನ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬುಧವಾರ ಮತದಾರರ ಸಾಕ್ಷರತಾ ಸಂಘ, ಐಕ್ಯೂಎಸಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಮತದಾನದ ಮಹತ್ವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಎಂ.ಜಿ.ಎಂ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿಯವರು ಮತದಾನ ಮಹತ್ವದ ಕುರಿತು ಮಾತನಾಡುತ್ತಾ, ಚುನಾವಣೆ ಪ್ರಜಾಪ್ರಭುತ್ವದ ಮಾನದಂಡ. ಇಲ್ಲಿ ಮತದಾನವು ಪ್ರಜೆಗಳ ಅಸ್ತಿತ್ವವನ್ನು ಎತ್ತಿ ಹಿಡಿಯುತ್ತದೆ. ಭಾರತವು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ, ಕಳೆದ ೭೫ ವರ್ಷಗಳಿಂದ ಮತದಾನದ ಪ್ರಮಾಣವನ್ನು ನೋಡಿದರೆ ಬೇಸರವಾಗುತ್ತದೆ. ಅದರಲ್ಲಿಯೂ, ವಿದ್ಯಾವಂತರಲ್ಲಿ ಮತ್ತು ಪಟ್ಟಣಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಿರುವುದು ವಿಷಾದನೀಯ.

ಇತ್ತೀಚಿನ ದಿನಗಳಲ್ಲಿ ಮತದಾನದ ಜಾಗ್ರತಿ ಕಾರ್ಯಕ್ರಮಗಳಿಂದ ಯುವ ಮತದಾರರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಸದೃಢ ಪ್ರಜಾಪ್ರಭುತ್ವ ಸ್ಥಾಪಿಸುವಲ್ಲಿ ಯುವಕರ ಪಾತ್ರ ಮುಖ್ಯ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರದ ಪ್ರೊ. ಭಾಸ್ಕರ ಶೆಟ್ಟಿ ಎಸ್, ಮತದಾನದಲ್ಲಿ ಬದುಕಿನ ಹಕ್ಕಿದೆ. ಅದನ್ನು ಉಳಿಸಿಕೊಳ್ಳಲು ಮತದಾರರು ಜಾಗೃತರಾಗಿ ಮತದಾನ ಮಾಡಬೇಕೆಂದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವಾಣಿ ಆರ್ ಬಲ್ಲಾಳ್ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಎಲ್ಲಾ ತರಗತಿಗಳಲ್ಲಿ ಹಾಜರಿದ್ದ ಉಪನ್ಯಾಸಕರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಮತದಾರರ ಸಾಕ್ಷರತಾ ಸಂಘದ ಸಂಚಾಲಕರಾದ ಮಂಜುನಾಥ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಐಕ್ಯೂಎಸಿ ಸಂಚಾಲಕರಾದ ಸೋಜನ್ ಕೆ.ಜಿ., ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಅಶೋಕ್ ಭಂಡಾರಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ರಾಜೇಂದ್ರ ಕೆ., ಉಪನ್ಯಾಸಕರಾದ ಡಾ. ರಾಮದಾಸ ಪ್ರಭು, ಸುಚಿತ್ರಾ, ನಾಗರಾಜ ಹೆಗ್ಗಡೆ, ಪ್ರಮೀಳಾ ಮೊದಲಾದವರು ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ವಿದ್ಯಾರ್ಥಿ ಪ್ರತಿನಿಧಿಗಳು ಹಾಜರಿದ್ದರು. ಕ್ಯಾಂಪಸ್ ಅಂಬಾಸಿಡರ್ ರೇಷ್ಮಾ ವಂದಿಸಿದರು. ಇನ್ನೋರ್ವ ಕ್ಯಾಂಪಸ್ ಅಂಬಾಸಿಡರ್ ದಿವೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!