Home ಸುದ್ಧಿಗಳು ಪ್ರಾದೇಶಿಕ ಉಡುಪಿ-ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಉಡುಪಿ-ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ

387
0

ಉಡುಪಿ, ಏ.24: ಇಲ್ಲಿನ ಸಂತೆಕಟ್ಟೆಯ ರಾ.ಹೆ. 66ರ ಸಮೀಪದ ಅಂಬಾಗಿಲು ಬಳಿಯ ಪುತ್ತೂರು ಗ್ರಾಮದ ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಅಕ್ಷಯ ತೃತೀಯ ದಿನದಂದು ದೇವಳದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೇ.ಮೂ. ಪುತ್ತೂರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ನೆರವೇರಿತು. ಬೆಳಿಗ್ಗೆ ಪ್ರಾರ್ಥನೆ, ಪುಣ್ಯಾಹ, ಕಲಾ ಸಾನಿಧ್ಯಯುಕ್ತವಾಗಿ ದೇವಳದಲ್ಲಿ ಚಂಡಿಕಾಯಾಗ, ಶ್ರೀ ಸತ್ಯನಾರಾಯಣ ಪೂಜೆ, ಪುರ್ಣಾಹುತಿ ಜರುಗಿತು.

ಮಧ್ಯಾಹ್ನ ವಿಶೇಷ ಹೂವಿನ ಅಲಂಕಾರ, ಮಹಾಪೂಜೆ ದೇವಳದ ಅರ್ಚಕರಾದ ರಾಮಚಂದ್ರ ಗಾಂವಸ್ಕರ್ ನಡೆಸಿಕೊಟ್ಟರು. ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಸಂಜೆ ಶ್ರೀ ಲಕ್ಷ್ಮೀ ವೆಂಕಟೇಶ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮತ್ತು ರಾತ್ರಿ 7.30 ಕ್ಕೆ ಮಹಾಪೂಜೆ, 8ಕ್ಕೆ ದೇವಿ ದರ್ಶನ ಸೇವೆಯು ದೇವಿ ಪಾತ್ರಿಗಳಾದ ಪದ್ಮನಾಭ ಶೇಟ್ ಅವರ ನೇತೃತ್ವದಲ್ಲಿ ನಡೆಯಿತು. ಶ್ರೀನಿವಾಸ ಗಾಂವಸ್ಕರ್, ವಿನೋದ್ ಗಾಂವಸ್ಕರ್, ವಾಸುದೇವ ಗಾಂವಸ್ಕರ್, ಗಣೇಶ್ ಗಾಂವಸ್ಕರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.