Home ಸುದ್ಧಿಗಳು ಪ್ರಾದೇಶಿಕ ತೆಂಕನಿಡಿಯೂರು: ಏ. 30 ರಿಂದ ಬೇಸಿಗೆ ಶಿಬಿರ

ತೆಂಕನಿಡಿಯೂರು: ಏ. 30 ರಿಂದ ಬೇಸಿಗೆ ಶಿಬಿರ

523
0

ಮಲ್ಪೆ, ಏ. 24: ಉಡುಪಿ ತೆಂಕನಿಡಿಯೂರಿನ ಬಾಲ ಸಂಸ್ಕಾರ ಕೇಂದ್ರದವರು, ಶ್ರೀ ಕಾಳಿಕಾಂಬಾ ಭಜನಾ ಸಂಘ ಹಾಗೂ ಶ್ರೀ ದೇವಿ ಮಹಿಳಾ ಮಂಡಳಿಯ ಸಹಕಾರದೊಂದಿಗೆ 30.04.2023 ರಿಂದ 07.05.2023ರ ತನಕ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ ‘ವಿಕಾಸ-2023’ನ್ನು ಹಮ್ಮಿಕೊಂಡಿದ್ದಾರೆ.

5 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ವಿಶೇಷ ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ, ಭಕ್ತಿಗೀತೆ, ಭಾವಗೀತೆ, ಜನಪದ ಹಾಡು, ನೃತ್ಯ, ಚಿತ್ರಕಲೆ, ಗ್ರೀಟಿಂಗ್ಸ್ ತಯಾರಿ, ಕೊಲಾಜ್, ಫೇಸ್ ಪೈಂಟಿಂಗ್, ರಂಗ ತರಬೇತಿ, ಮೂಕಾಭಿನಯ ಮೊದಲಾದ ವಿಷಯಗಳಲ್ಲಿ ತರಬೇತಿ ನೀಡಲಾಗುವುದೆಂದು ಕೇಂದ್ರದ ಪ್ರಕಟನೆ ತಿಳಿಸಿದೆ.

ಎಂಟು ದಿನಗಳು ನಡೆಯುವ ಈ ವಿಶೇಷ ಶಿಬಿರದಲ್ಲಿ ಕೇವಲ 40 ಶಿಬಿರಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು ಮೊದಲು ಹೆಸರು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9844709515, 9380882943, 9964024066 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.