Friday, September 20, 2024
Friday, September 20, 2024

ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ ‘ಸಿಡಿಲು’ ಆಪ್

ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ ‘ಸಿಡಿಲು’ ಆಪ್

Date:

ಉಡುಪಿ, ಏ. 27: ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ. ಸಿಡಿಲು-ಮೊಬೈಲ್‌ ಆಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಸಿಡಿಲಿನಿಂದ ರಕ್ಷಿಸಿಕೊಳ್ಳುವುದು ಹೇಗೆ?: ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ಮನೆಯ ಒಳಗಿರುವಾಗ ಸಿಡಿಲು ಬಂದಾಗ ಕಿಟಕಿಯಿಂದ ದೂರವಿರಬೇಕು. ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು. ಗೃಹಪಯೋಗಿ ಉಪಕರಣಗಳ ಫ್ಲಗ್‌ಗಳನ್ನು ತೆಗೆದಿಡಬೇಕು. ಗೋಡೆಯಿಂದ ದೂರವಿರುವುದು ಉತ್ತಮ. ಒಣಮರದ ಪೀಠೋಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುತೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭದಲ್ಲಿ ಸ್ನಾನಮತ್ತು ಪಾತ್ರೆ ಹಾಗೂ ಇತರ ನೀರಿನೊಂದಿಗಿನ ಕೆಲಸವನ್ನು ಮಾಡಬಾರದು.

ಹೊರಾಂಗಣದಲ್ಲಿದ್ದಾಗ ಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು. ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು. ಸಿಡಿಲಿನ ಸಂದರ್ಭದಲ್ಲಿ ಕೊಡೆ ಅಥವಾ ಛತ್ರಿಯನ್ನು ಬಳಸಬಾರದು. ಮಕ್ಕಳು ಈ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸಬಾರದು. ವಾಹನ ಚಲಿಸುವ ಸಂದರ್ಭದಲ್ಲಿ ಸಿಡಿಲು ಬಂದಾಗ ಮರ ಹಾಗೂ ತಂತಿಕಂಬಗಳಿಂದ ವಾಹನವನ್ನು ದೂರ ನಿಲ್ಲಿಸಿ, ವಾಹನದೊಳಗೆ ಇರುವುದು ಸೂಕ್ತ. ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು. ಕಾಡಿನಲ್ಲಿದ್ದ ಸಂದರ್ಭದಲ್ಲಿ ಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯುಬೇಕು. ಗುಂಪಿನಲ್ಲಿದ್ದಾಗ ಜನರಿಂದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!