Saturday, September 21, 2024
Saturday, September 21, 2024

ಮೋದಿ ಪ್ರಚಾರದಿಂದ ಬಿಜೆಪಿ ವಿವಿಧ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿಲ್ಲವೇ: ಕಾಂಗ್ರೆಸ್ ಪ್ರಶ್ನೆ

ಮೋದಿ ಪ್ರಚಾರದಿಂದ ಬಿಜೆಪಿ ವಿವಿಧ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿಲ್ಲವೇ: ಕಾಂಗ್ರೆಸ್ ಪ್ರಶ್ನೆ

Date:

ಉಡುಪಿ, ಏ. 28: ರಾಹುಲ್ ಅವರು ಚುನಾವಣಾ ಪ್ರಚಾರಕ್ಕೆ ಹೋದ ಕಡೆ ಕಾಂಗ್ರೆಸ್ ಸೋತ ಇತಿಹಾಸವಿದೆ ಎಂದು ಹೇಳಿಕೆ ನೀಡಿದ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಹೇಳಿಕೆ ಅವರ ಜಾಣ ಮರೆವನ್ನು ಪ್ರತಿಬಿಂಬಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ. ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ಮೋದಿಯವರು ಹಲವು ರಾಜ್ಯಗಳ ಚುನಾವಣೆಗಳಲ್ಲಿ ಪ್ರಚಾರಕ್ಕೆ ಹೋದರೂ ಅಧಿಕಾರವನ್ನು ಗಳಿಸುವಲ್ಲಿ ವಿಫಲರಾಗಿಲ್ಲವೇ? ಇದನ್ನು ಬಿಜೆಪಿ ಅಧ್ಯಕ್ಷರು ನೆನಪಿಸಿಕೊಳ್ಳಬೇಕಾಗಿದೆ.

ರಾಜಸ್ಥಾನ, ಹಿಮಾಚಲ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಆಂಧ್ರ, ಕೇರಳ ರಾಜ್ಯಗಳಿಗೆ ಮೋದಿಯವರು ಪ್ರಚಾರಕ್ಕೆ ತೆರಳಲಿಲ್ಲವೇ? ಆ ರಾಜ್ಯಗಳಲ್ಲಿ ಬಿಜೆಪಿ ಸೋಲಲು ಮೋದಿಯವರು ಕಾರಣರೇ? ಬಿಜೆಪಿ ಅಧ್ಯಕ್ಷರು ಇದನ್ನು ಸ್ವಷ್ಟೀಕರಿಸಬೇಕು. ರಾಹುಲ್ ಗಾಂಧಿಯವರು ಅದಾನಿ ಕುರಿತು ಹಗರಣವನ್ನು ಲೋಕಸಭೆಯಲ್ಲಿ ಎತ್ತಿದ ಕೆಲವೇ ದಿನಗಳಲ್ಲಿ ಅವರ ವಿರುದ್ಧ ಕೋರ್ಟ್ ತೀರ್ಪು ಬಂತು. 24 ಗಂಟೆ ಒಳಗೆ ಅವರನ್ನು ಸದಸ್ಯತನದಿಂದ ಅನರ್ಹಗೊಳಿಸಲಾಯಿತು. ಹಗರಣವನ್ನು ಮುನ್ನಲೆಗೆ ತರೆದಂತೆ ತಡೆಯಲಾಯಿತು. ವಿದ್ಯಾವಂತ ಹಾಗೂ ದೇಶ ವಿದೇಶಗಳ ಆಗು ಹೋಗುಗಳ ಸ್ವಷ್ಟ ಅರಿವಿರುವ ಎಲ್ಲರೊಂದಿಗೆ ಬೆರೆಯುವ ರಾಹುಲ್ ಅವರ ವ್ಯಕ್ತಿತ್ವವನ್ನು ಹಾಳುಗೆಡವಲು ಹಲವಾರು ಕೋಟಿ ಖರ್ಚು ಮಾಡಲಾಯಿತು. ಅಂದರೆ ಇದು ರಾಹುಲ್ ಬಗ್ಗೆ ಬಿಜೆಪಿಗೆ ಇರುವ ಭಯವಲ್ಲದೆ ಮತ್ತೇನು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಶ್ನಿಸಿದ್ದಾರೆ.

ಬಿಜೆಪಿ ಗೆಲ್ಲುವ ಸ್ಥಿತಿಯಲ್ಲಿ ಇಲ್ಲದಿದ್ದರಿಂದಲೇ ಹತಾಶರಾಗಿ ಈ ಹೇಳಿಕೆ ನೀಡುತ್ತಿದ್ದಾರೆ. ಭ್ರಷ್ಟ ರಾಜ್ಯ ಸರಕಾರದ ಬಗ್ಗೆ ಜನರು ಭ್ರಮ ನಿರಸನಗೊಂಡಿದ್ದಾರೆ. ಶಾಸಕರಿಗೆ ಅಮಿಷಗಳನ್ನು ಒಡ್ಡಿ ಐಟಿ ದಾಳಿಯಿಂದ ಭಯಪಡಿಸಿ ಆಪರೇಷನ್ ಕಮಲ ಮೂಲಕ ಬಿಜೆಪಿ ರಚಿಸಿದ ಸರಕಾರವನ್ನು ಜನತೆ ಮರೆತಿಲ್ಲ. ಬಹುಮತವಿಲ್ಲದೆ ಹಿಂಬಾಗಿಲಿನ ಮೂಲಕ ರಾಜ್ಯದಲ್ಲಿ ಅಧಿಕಾರವನ್ನು ಸ್ಥಾಪಿಸಿದ ಬಿಜೆಪಿಯು ಇತಿಹಾಸದಲ್ಲಿಯೇ ಅತ್ಯಂತ ಭ್ರಷ್ಟ ಸರಕಾರ ಎಂಬ ಅಪಕೀರ್ತಿಗೆ ಒಳಗಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯ ಮೂಲಕ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!