Friday, September 20, 2024
Friday, September 20, 2024

ಹೊಸ ತಂತ್ರಜ್ಞಾನಕ್ಕೆ ಕಲಾಂ ಕೊಡುಗೆ ಅನನ್ಯ: ಜಯಪ್ರಕಾಶ್ ರಾವ್

ಹೊಸ ತಂತ್ರಜ್ಞಾನಕ್ಕೆ ಕಲಾಂ ಕೊಡುಗೆ ಅನನ್ಯ: ಜಯಪ್ರಕಾಶ್ ರಾವ್

Date:

ಉಡುಪಿ, ಮೇ. 8: ವ್ಯಕ್ತಿಯಲ್ಲಿರುವ ಶಕ್ತಿಯನ್ನು ಗುರುತಿಸುವ ಕೆಲಸ ಮಾಡಬೇಕೆಂದು ಅಬ್ದುಲ್ ಕಲಾಂ ಯಾವಾಗಲೂ ಹೇಳುತ್ತಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ಹಾಗೂ ಎಂಜಿಎಂ ಕಾಲೇಜು ಉಡುಪಿ ಸಹಕಾರದೊಂದಿಗೆ ಸೋಮವಾರ ಎಂಜಿಎಂ ಕಾಲೇಜಿನಲ್ಲಿ ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕೆ. ಜಯಪ್ರಕಾಶ್ ರಾವ್ ಉಪನ್ಯಾಸ ನೀಡುತ್ತಾ ಮಾತನಾಡಿದರು.

ಅವರೊಂದಿಗಿನ ಏಳು ವರ್ಷದ ಒಡನಾಟಗಳನ್ನು ನೆನಪಿಸಿಕೊಳ್ಳುತ್ತಾ ರಾಕೆಟ್ ತಂತ್ರಜ್ಞಾನದ ಮೇರು ವ್ಯಕ್ತಿ ಕಲಾಂ, ಅತ್ಯಂತ ಸರಳ ವ್ಯಕ್ತಿತ್ವದ ಅವರು ಹೊಸ ತಂತ್ರಜ್ಞಾನಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಸರಳ ಜೀವನವನ್ನು ನಡೆಸುತ್ತಾ ನಮಗೆಲ್ಲರಿಗೂ ಮಾದರಿಯಾಗಿದ್ದರು ಎಂದರು.

ಕಾಲೇಜು ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಯನ್ನಾಡಿದರು.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ದಾನಿಗಳಾದ ಭವಾನಿ ವಿ. ಶೆಟ್ಟಿ, ಶಾರದಾ ಶೆಟ್ಟಿ ಉಪಸ್ಥಿತರಿದ್ದರು.

ಕಸಾಪ ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಹೆಚ್ ಪಿ. ಸ್ವಾಗತಿಸಿ, ಪ್ರಸ್ತಾಪಿಸಿದರು. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ನಿರೂಪಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಪುತ್ತಿ ವಸಂತ್ ಕುಮಾರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!