Friday, September 20, 2024
Friday, September 20, 2024

ಮತದಾನಕ್ಕೆ ಸಕಲ ಸಿದ್ದತೆ, ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಮತದಾನಕ್ಕೆ ಸಕಲ ಸಿದ್ದತೆ, ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ, ಮೇ 9: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲೆಯ 118-ಬೈಂದೂರು, 119-ಕುಂದಾಪುರ, 120-ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತಯಂತ್ರ ಸೇರಿದಂತೆ ಇನ್ನಿತರೆ ಸಾಮಾಗ್ರಿಗಳೊಂದಿಗೆ ಪೊಲೀಸ್ ಬಂದೋಬಸ್ತ್ ನೊಂದಿಗೆ ಮತಗಟ್ಟೆಗಳಿಗೆ ಸುರಕ್ಷಿತವಾಗಿ ತಲುಪಿರುತ್ತಾರೆ.

ಈ ಮತದಾನ ಕಾರ್ಯಕ್ಕಾಗಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಮತಗಟ್ಟೆ ಅಧಿಕಾರಿಗಳನ್ನು ಹಾಗೂ ಮೈಕ್ರೋ ಆಬ್ಸರ್ವರ್ ಹಾಗೂ ಭದ್ರತಾ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು, ಅಧ್ಯಕ್ಷಾಧಿಕಾರಿ (ಪ್ರಿಸೈಡಿಂಗ್ ಆಫೀಸರ್) 1337, ಸಹಾಯಕ ಅಧ್ಯಕ್ಷಾಧಿಕಾರಿ (ಅಸಿಸ್ಟೆಂಟ್ ಪ್ರಿಸೈಡಿಂಗ್ ಆಫೀಸರ್) 1337, 3 ಮತ್ತು 4 ಮತಗಟ್ಟೆ ಅಧಿಕಾರಿಗಳು 2674 ಹಾಗೂ 1111 ‘ಡಿ’ ದರ್ಜೆ ನೌಕರರನ್ನು ನೇಮಿಸಲಾಗಿದೆ. ಮತದಾರರು ತಮ್ಮ ಮತಗಟ್ಟೆ ಸಂಖ್ಯೆ ಮತ್ತು ಕ್ರಮ ಸಂಖ್ಯೆಯನ್ನು NVSP.in ಹಾಗೂ VHA APP ಮೂಲಕ ತಮ್ಮ ಮತದಾರರ ಗುರುತಿನ ಚೀಟಿಯ ಸಂಖ್ಯೆಯನ್ನು ನಮೂದಿಸಿ ಮಾಹಿತಿಯನ್ನು ಪಡೆಯಬಹುದು.

ಮೇ 10 ರಂದು ನಡೆಯುವ ಮತದಾನ ಕಾರ್ಯಕ್ಕೆ ಮತದಾರರು ಎಪಿಕ್ ಕಾರ್ಡ್ ಅಥವಾ ಚುನಾವಣಾ ಆಯೋಗ ತಿಳಿಸಿರುವ ಪರ್ಯಾಯ ಗುರುತಿನ ದಾಖಲೆಗಳಾದ ಆಧಾರ್ ಕಾರ್ಡ್, ನರೇಗಾ ಉದ್ಯೋಗ ಗುರುತಿನ ಚೀಟಿ, ಅಂಚೆ ಕಛೇರಿ ಮತ್ತು ಬ್ಯಾಂಕ್ಗಳಲ್ಲಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ, ಕಾರ್ಮಿಕ ಇಲಾಖೆಯಿಂದ ನೀಡಲಾಗಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಆರ್.ಜಿ.ಐ ಮತ್ತು ಎನ್.ಪಿ.ಆರ್ ಮೂಲಕ ನೀಡಿರುವ ಸ್ಮಾರ್ಟ್ ಕಾರ್ಡ್, ಪಾಸ್ಪೋರ್ಟ್, ಭಾವಚಿತ್ರ ಹೊಂದಿರುವ ಪಿಂಚಣಿ ಕಾರ್ಡ್, ಕೇಂದ್ರ / ರಾಜ್ಯ / ಪಿಎಸ್ಯು / ಪಬ್ಲಿಕ್ ಲಿಮಿಟೆಡ್ ಕಂಪೆನಿಗಳ ಭಾವಚಿತ್ರ ಹೊಂದಿರುವ ಸೇವಾ ಗುರುತಿನ ಚೀಟಿ, ಲೋಕಸಭಾ ಸದಸ್ಯರು / ರಾಜ್ಯಸಭಾ ಸದಸ್ಯರು / ಶಾಸಕರು / ವಿಧಾನಸಭಾ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳೊಂದಿಗೆ ತೆರಳಿ ಮತದಾನ ಮಾಡಬಹುದಾಗಿದೆ.

ಜಾಹೀರಾತು/ Advertisement

ವಿಶೇಷ ಚೇತನ ಮತದಾರರಿಗಾಗಿ ಗಾಲಿ ಕುರ್ಚಿ, ಭೂತಕನ್ನಡಿ (ಮ್ಯಾಗ್ನಿಫೈಡ್ ಗ್ಲಾಸ್) ಬ್ರೈಲ್ ಲಿಪಿಯ ಮಾದರಿ ಮತಪತ್ರ, ಆದ್ಯತೆ ಮೇಲೆ ಪ್ರವೇಶ, ಖಚಿmಠಿ, ಕೋರಿಕೆ ಮೇರೆಗೆ ವಾಹನ ವ್ಯವಸ್ಥೆ ಸಿದ್ಧತೆ ಮಾಡಲಾಗಿದೆ. ಮೊಬೈಲ್ ಫೋನ್, ಡಿಜಿಟಲ್, ಪೆನ್ ಕ್ಯಾಮೆರಾ, ಆಯುಧ, ಶಸ್ತ್ರಾಸ್ತ್ರ, ನೀರಿನ ಬಾಟಲ್, ಯಾವುದೇ ದ್ರಾವಣ, ಆಹಾರ ಸಾಮಾಗ್ರಿಗಳು, ಯಾವುದೇ ಸ್ಪೋಟಕ ಮತ್ತಿತರ ವಸ್ತುಗಳನ್ನು ಮತಗಟ್ಟೆ ಕೇಂದ್ರಕ್ಕೆ ಕೊಂಡೊಯ್ಯಲು ಅವಕಾಶವಿರುವುದಿಲ್ಲ. ಸಾರ್ವಜನಿಕರು ಮೇ 10 ರಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮತದಾನವನ್ನು ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕೋರಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!