Friday, September 20, 2024
Friday, September 20, 2024

ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಿ: ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಿ: ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

Date:

ಉಡುಪಿ, ಮೇ 16: ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಮುಂದಿನ ಮಳೆಗಾಲ ಪ್ರಾರಂಭವಾಗುವವರೆಗೆ ಸಮರ್ಪಕ ರೀತಿಯಲ್ಲಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು. ಉಡುಪಿ ನಗರಸಭೆಗೆ ಮಂಗಳವಾರ ಭೇಟಿ ನೀಡಿದ ಶಾಸಕರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈಗಾಗಲೇ ತಿಳಿಸಿರುವಂತೆ ನೀರು ಪೂರೈಕೆ ರೇಶನಿಂಗ್ ಮೂಲಕ 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಹಾಗೂ ಪ್ರತಿ ವಾರ್ಡಿನ ಬೇಡಿಕೆಯಂತೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನೀರು ಪೂರೈಕೆಯ ಬಗ್ಗೆ ವಾರ್ಡಿನ ನಗರಸಭಾ ಸದಸ್ಯರಿಗೆ ಮಾಹಿತಿ ನೀಡಿ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ಸಮಯದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಹೇಳಿದರು.

ಮುಂದಿನ ವಾರ ಮಳೆಗಾಲ ಪೂರ್ವ ಸಿದ್ಧತೆಯಾಗಿ ಚರಂಡಿ ಹೂಳೆತ್ತುವುದು, ಟಾಸ್ಕ್ ಫೋರ್ಸ್ ಹಾಗೂ ಇತರ ತುರ್ತು ಕೆಲಸಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಹೇಳಿದರು.

ಸಭೆಯಲ್ಲಿ ನಿಕಟಪೂರ್ವ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ, ಪೌರಾಯುಕ್ತರಾದ ರಮೇಶ್ ನಾಯ್ಕ್, ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!