Home ಸುದ್ಧಿಗಳು ಪ್ರಾದೇಶಿಕ ರೈತರು ಪ್ರೋತ್ಸಾಹಧನ ಪಡೆಯಲು ಇ-ಕೆವೈಸಿ ಕಡ್ಡಾಯ

ರೈತರು ಪ್ರೋತ್ಸಾಹಧನ ಪಡೆಯಲು ಇ-ಕೆವೈಸಿ ಕಡ್ಡಾಯ

247
0

ಉಡುಪಿ, ಮೇ 19: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ.ಕಿಸಾನ್ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ.

ಕೃಷಿ ಇಲಾಖೆಯ ವತಿಯಿಂದ ಈಗಾಗಲೇ ಈ ಕುರಿತು ಮಾಹಿತಿ ನೀಡಲಾಗಿದ್ದು, ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.