Home ಸುದ್ಧಿಗಳು ಪ್ರಾದೇಶಿಕ ಮೇ 23, 24: ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೇ 23, 24: ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

433
0

ಉಡುಪಿ, ಮೇ 20: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 23 ಹಾಗೂ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11 ಕೆ.ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಉಡುಪಿ-3 ಮತ್ತು 110/33/11 ಕೆ.ವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬನ್ನಂಜೆ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಪಿ.ಪಿ.ಸಿ ಕಾಲೇಜು, ಫಿಶ್ ಮಾರ್ಕೆಟ್ ರೋಡ್, ಕೋರ್ಟ್ ರಸ್ತೆ, ಮಾರುತಿ ವಿಥೀಕಾ, ಪಿ.ಡಬ್ಲ್ಯೂ.ಡಿ ಆಫೀಸ್, ತೆಂಕಪೇಟೆ, ಕೆ.ಎಂ.ಮಾರ್ಗ, ಕನಕದಾಸ ರಸ್ತೆ, ಅಜ್ಜರಕಾಡು, ಬನ್ನಂಜೆ, ಕಾಡಬೆಟ್ಟು, ವಿದ್ಯಾರಣ್ಯ ಮಾರ್ಗ, ಬ್ರಹ್ಮಗಿರಿ, ತಾಲೂಕು ಪಂಚಾಯತ್, ಸಿಟಿ ಬಸ್ ಸ್ಟ್ಯಾಂಡ್, ಸರ್ವಿಸ್ ಬಸ್ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 23 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11 ಕೆ.ವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪೆರ್ಡೂರು ಫೀಡರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 23 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 110/33/11 ಕೆ.ವಿ ವಿದ್ಯುತ್ ನೋಡಲ್ ಕೇಂದ್ರ ಮಣಿಪಾಲದಡಿಯಲ್ಲಿ ಬರುವ 110/11 ಕೆ.ವಿ ಬ್ರಹ್ಮಾವರ ವಿದ್ಯುತ್ ಕೇಂದ್ರದಲ್ಲಿ 110/11 ಕೆ.ವಿ ಪರಿವರ್ತಕ-1 ಮತ್ತು ಪರಿವರ್ತಕ-2 ರಲ್ಲಿ ಪಾಲನೆ ಮತ್ತು ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರಿನಲ್ಲಿ ಬ್ರಹ್ಮಾವರ, ಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ಮಟಪಾಡಿ, ಚಾಂತಾರು, ಹಂದಾಡಿ, ಇಂದಿರಾನಗರ, ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ಹೈರಾಬೆಟ್ಟು, ಜಾತಬೆಟ್ಟು, ಉಗ್ಗೇಲ್ ಬೆಟ್ಟು, ಲಕ್ಷ್ಮೀನಗರ, ಅಮ್ಮುಂಜೆ, ಕೊಳಲಗಿರಿ, ಕುಮ್ರಗೋಡು, ವಾರಂಬಳ್ಳಿ, ಹೇರೂರು, ಮುಂಡ್ಕಿನಜೆಡ್ಡು, ಕನ್ನಾರು, ಪೇತ್ರಿ, ಮಡಿ, ಕೃಷ್ಣ ಮಿಲ್ಕ್, ಸುಪ್ರೀಂ ಫೀಡ್ಸ್, ರುಡ್ ಸೆಟ್, ಹಾವಂಜೆ, ಚೇರ್ಕಾಡಿ, ಮಂದಾರ್ತಿ, ಕಾಡೂರು, ತಂತ್ರಾಡಿ, ಹೆಗ್ಗುಂಜೆ, ನಡೂರು, ಹೆಬ್ಬಾಡಿ, ಮೊಗವೀರಪೇಟೆ, ಕೊಕ್ಕರ್ಣೆ, ಕೆಂಜೂರು, ಶೀರೂರು, ಹಿಲಿಯಾಣ, ನಾಲ್ಕೂರು, ಮುದ್ದೂರು, ನಯಂಪಳ್ಳಿ, ಉಪ್ಪಿನಕೋಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 23 ರಂದು ಬೆಳಗ್ಗೆ 10 ರಿಂದ ಸಂಜೆ 4.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಂಟಕಲ್ಲು ಮತ್ತು ಶಂಕರಪುರ ಫೀಡರ್ ಮಾರ್ಗದಲ್ಲಿ ಪ್ರೀ ಮಾನ್ಸೂನ್ (ಟ್ರೀ ಕಟ್ಟಿಂಗ್) ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಂಟಕಲ್ಲು, ಪಾಂಗಳ, ಮೂಡಬೆಟ್ಟು, ಉಳಿಯಾರಗೋಳಿ, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಪಾಜೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 23 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಿದ್ಕಲ್ಕಟ್ಟೆ ಮತ್ತು ಆವರ್ಸೆ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಿದ್ಕಲ್ಕಟ್ಟೆ, ಕಕ್ಕುಂಜೆ, ಹಾಲಾಡಿ-76, ಹೆಸ್ಕತ್ತೂರು, ಹಾಲಾಡಿ-28, ರಟ್ಟಾಡಿ, ಅಮಾಸೆಬೈಲು, ಮಚ್ಚಟ್ಟು, ಹಳ್ಳಾಡಿ-ಹರ್ಕಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಶಂಕರನಾರಾಯಣ ಮತ್ತು ಯಡಾಡಿ-ಮತ್ಯಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 23 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುವುದು.

110/33/11 ಕೆ.ವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕುಂದಾಪುರ, ಸಂಗಮ್, ಇಂಡಸ್ಟ್ರೀಯಲ್, ಕುಂಭಾಶಿ, ಅಂಪಾರು, ಜಪ್ತಿ, ಬಳ್ಕೂರು, ಜಪ್ತಿವಾಟರ್ಸಪ್ಲ್ಯೆ, ಗುರುಕುಲ ಮತ್ತು 33/11ಕೆ.ವಿ ಕೋಟ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೆದೂರು ಮಾರ್ಗಗಳಲ್ಲಿ ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕುಂದಾಪುರ, ಹಂಗಳೂರು, ಕೋಟೇಶ್ವರ, ಕೊರ್ಗಿ, ಕಾಳಾವರ, ಅಂಪಾರು, ಜಪ್ತಿ, ಮೊಳಹಳ್ಳಿ, ಅಸೋಡು, ಯಡಾಡಿ-ಮತ್ಯಾಡಿ, ವಕ್ವಾಡಿ, ತೆಕ್ಕಟ್ಟೆ, ಕುಂಭಾಶಿ, ಅಂಪಾರು, ಹಳ್ನಾಡು, ಕಾವ್ರಾಡಿ, ಶಂಕರನಾರಾಯಣ, ಕೋಣಿ, ಬಳ್ಕೂರು, ಜಪ್ತಿ, ಹೊಂಬಾಡಿ-ಮಂಡಾಡಿ, ಕುಂದಾಪುರ ಪುರಸಭೆಯ ಕುಡಿಯುವ ನೀರಿನ ಸ್ಥಾವರ, ಬಸ್ರೂರು, ಆನಗಳ್ಳಿ, ಕಂದಾವರ, ಅಂಕದಕಟ್ಟೆ, ಕೆದೂರು, ಉಳ್ತೂರು, ಬೇಳೂರು ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 23 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

110/11 ಕೆ.ವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ ಮತ್ತು ಬೆಳ್ಮಣ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್‌ಗಳಲ್ಲಿ ಬೆಳ್ಮಣ್, ಗೋಳಿಕಟ್ಟೆ, ನೀಚಾಲು, ಬೆಳ್ಮಣ್ ದೇವಸ್ಥಾನ, ನಂದಳಿಕೆ, ಜಂತ್ರ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 23 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

33/11 ಕೆ.ವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಶಿವಪುರ, ಚಾರ, ಮುದ್ರಾಡಿ, ನಾಡ್ಪಾಲು ಫೀಡರಿನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ, ಶಿವಪುರ, ಕೆರೆಬೆಟ್ಟು, ಮಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಕನ್ಯಾನ, ಚಾರ, ಹೊಸೂರು, ಗಾಂಧೀನಗರ, ಮುದ್ರಾಡಿ, ಮುನಿಯಾಲು, ಬಚ್ಚಪ್ಪು, ಕಬ್ಬಿನಾಲೆ, ಸೀತಾನದಿ, ಸೋಮೇಶ್ವರ, ನಾಡ್ಪಾಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 24 ರಂದು ಬೆಳಗ್ಗೆ 8.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಲ್ಲಿ ಹೆಚ್ಚುವರಿ ಫೀಡರ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಮಾರ್ಗದಲ್ಲಿ ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ, ಎಂ.ಐ.ಟಿ ಕ್ಯಾಂಪಸ್, ಕೆ.ಎಂ.ಸಿ ಆಸ್ಪತ್ರೆ, ಸಿಂಡಿಕೇಟ್ ಸರ್ಕಲ್, ಎಂ.ಜಿ.ಸಿ ಸ್ಕೂಲ್, ಬಿ.ಎಸ್.ಎನ್.ಎಲ್, ಡಿ.ಸಿ ಆಫೀಸ್, ಆರ್.ಟಿ.ಒ ಆಫೀಸ್, ಪೆರಂಪಳ್ಳಿ, ಸಗ್ರಿ ನೋಳೆ, ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, ಶಿವಳ್ಳಿ ಇಂಡಸ್ಟ್ರೀಯಲ್ ಏರಿಯಾ, ಕೊರಂಗ್ರಪಾಡಿ, ಮಾರ್ಪಳ್ಳಿ, ಕುಕ್ಕಿಕಟ್ಟೆ, ಉದ್ಯಾವರ, ಕಟಪಾಡಿ, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ರೋಯಲ್ ಎಂಬೆಸಿ, ಮಣಿಪಾಲ ಟೌನ್, ವೇಣುಗೋಪಾಲ ಟೆಂಪಲ್ ಹತ್ತಿರ, ಮಣಿಪಾಲ ಮೀಡಿಯಾ ನೆಟ್‌ವರ್ಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 24 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.