Home ಸುದ್ಧಿಗಳು ಪ್ರಾದೇಶಿಕ ಮಕ್ಕಳ ಕನಸುಗಳಿಗೆ ಬಣ್ಣ ತುಂಬುವ ಕೆಲಸವಾಗಬೇಕು: ಸುಧೀಂದ್ರ ಶೆಟ್ಟಿ

ಮಕ್ಕಳ ಕನಸುಗಳಿಗೆ ಬಣ್ಣ ತುಂಬುವ ಕೆಲಸವಾಗಬೇಕು: ಸುಧೀಂದ್ರ ಶೆಟ್ಟಿ

270
0

ಶಿರಿಯಾರ, ಮೇ 23: ಮಕ್ಕಳ ಮನಸ್ಸುಗಳಲ್ಲಿ ನೂರಾರು ಕನಸುಗಳಿರುತ್ತವೆ, ಅಂತಹ ಕನಸುಗಳು ನನಸಾಗಿಸಲು ಪೋಷಕರ ಪ್ರೋತ್ಸಾಹ ಅಗತ್ಯ, ಇಂದಿನ ಮಕ್ಕಳೆ ಮುಂದಿನ ನವ ಭಾರತದ ಶಿಲ್ಪಿಗಳು ಅವರನ್ನು ಉತ್ತಮ ಪ್ರಜೆಯನ್ನಾಗಿಸುವ ಜವಬ್ದಾರಿ ನಮೆಲ್ಲರ ಮೇಲಿದೆ ಎಂದು ಶಿರಿಯಾರ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀಂದ್ರ ಶೆಟ್ಟಿ ಹೇಳಿದರು. ಶಿರಿಯಾರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ, ಶಿರಿಯಾರ, ಶಿರಿಯಾರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ನಡೆಯುತ್ತಿರುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಪಂಚಾಯತ್ ಉಪಾಧ್ಯಕ್ಷೆ ಅಮಿತಾ, ಸದಸ್ಯರಾದ ಚಂದ್ರ ಶೆಟ್ಟಿ, ವಿಶಾಲ, ಪ್ರಮೀಳಾ, ಕಾರ್ಯದರ್ಶಿ ಆನಂದ ನಾಯ್ಕ, ಸಂಪನ್ಮೂಲ ವ್ಯಕ್ತಿ ಮಲ್ಲಪ್ಪ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮನ ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಅಶ್ವಿನಿ ಕಾರ್ಯಕ್ರಮ ಸಂಯೋಜಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.