Home ಸುದ್ಧಿಗಳು ಪ್ರಾದೇಶಿಕ ತೆಂಕನಿಡಿಯೂರು ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ತೆಂಕನಿಡಿಯೂರು ಕಾಲೇಜಿನ ವಾರ್ಷಿಕ ಕ್ರೀಡಾಕೂಟ

647
0

ಉಡುಪಿ, ಮೇ 24: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇದರ 2022- 23ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಉಡುಪಿಯ ಸಾಫಲ್ಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷರಾದ ನಿರೂಪಮಾ ಪ್ರಸಾದ್ ಶೆಟ್ಟಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಹಿರಿಯರ ರಕ್ಷಣೆ ಮತ್ತು ಕಿರಿಯರಿಗೆ ಕೊಡುವ ಪ್ರೋತ್ಸಾಹ ಭಗವಂತನ ಕೃಪೆಗೆ ಪಾತ್ರವಾಗುವಂತದ್ದು. ಯುವಜನತೆಗೆ ಕ್ರೀಡೆಯಲ್ಲಿ ಸರಿಯಾದ ಪ್ರೋತ್ಸಾಹ ದೊರೆತಲ್ಲಿ ನಾವೆಲ್ಲಾ ಹೆಮ್ಮೆಪಡುವಂತ ಸಾಧನೆ ಮಾಡಬಲ್ಲರು ಎಂದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ ಮಾತನಾಡುತ್ತಾ, ಯುವಜನತೆ ಕ್ರೀಡೆಯಲ್ಲಿ ಸಕ್ರಿಯರಾಗುವಂತೆ ಕರೆಯಿತ್ತರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಹರಿಯಪ್ಪ ಕೋಟ್ಯಾನ್, ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ, ಬೋಧಕ ಬೋದಕೇತರರು ಉಪಸ್ಥಿತರಿದ್ದರು.

ಕ್ರೀಡಾಕೂಟ ಆಯೋಜಿಸಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ರೀಡಾ ಪ್ರತಿನಿಧಿ ಆಶಯ್ ವಂದಿಸಿದರು. ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಅಥ್ಲೆಟಿಕ್ ಸ್ಪರ್ಧೆಗಳ ಜೊತೆಗೆ ವಿದ್ಯಾರ್ಥಿಗಳ ಅಂತರ್ ತರಗತಿ ಪುರುಷರ ಮತ್ತು ಮಹಿಳಾ ಹಗ್ಗಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.