Friday, September 4, 2026
Friday, September 4, 2026

ಸನಾತನ ಸಂಸ್ಕೃತಿ ಉಳಿಸುವಲ್ಲಿ ಮಹಿಳೆಯರ ಕೊಡುಗೆ ಅನನ್ಯ: ರಶ್ಮಿ ಕಾರಂತ

ಸನಾತನ ಸಂಸ್ಕೃತಿ ಉಳಿಸುವಲ್ಲಿ ಮಹಿಳೆಯರ ಕೊಡುಗೆ ಅನನ್ಯ: ರಶ್ಮಿ ಕಾರಂತ

Date:

ಕೋಟ: ಮಹಿಳಾ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸಂಸ್ಥೆ ಇದರ ಮಹಾಸಭೆ ಗುರುನರಸಿಂಹ ದೇವಸ್ಥಾನದ ಜ್ಞಾನ ಮಂದಿರದಲ್ಲಿ ನಡೆಯಿತು. ಮುಖ್ಯ ಅಭ್ಯಾಗತರಾಗಿ ಬಿ.ಎಸ್.ಎನ್.ಎಲ್ ನಿವೃತ್ತ ಅಧಿಕಾರಿ ರಶ್ಮಿ ಕಾರಂತ ಮಾತನಾಡಿ, ನಮ್ಮ ಸನಾತನ ಧರ್ಮ ಹಾಗೂ ಸಂಸ್ಕೃತಿಗಳನ್ನು ಉಳಿಸುವ ಕೆಲಸ ಮಹಿಳೆಯರಿಂದ ಸಾಧ್ಯ ಎಂದು ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ಎಸ್.ಕಾರಂತ, ಕೂಟ ಮಹಾ ಜಗತ್ತು ಸಾಲಿಗ್ರಾಮ ಅಂಗಸಂಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿ ಶುಭ ಹಾರೈಸಿದರು. ಮಹಿಳಾ ವೇದಿಕೆ ಅಧ್ಯಕ್ಷೆ ಯಶೋದ ಸಿ
ಹೊಳ್ಳ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷೆ ಶ್ರೀಮತಿ ಮಯ್ಯ ಸ್ವಾಗತಿಸಿ, ಕಾರ್ಯದರ್ಶಿ ಲತಾ ಹೊಳ್ಳ ವರದಿ ವಾಚಿಸಿದರು. ಖಜಾಂಚಿ ಗೀತಾ ಅಧಿಕಾರಿ ಲೆಕ್ಕ ಪತ್ರ ಮಂಡಿಸಿದರು. ಈ ಸಂದರ್ಭದಲ್ಲಿ ಅಶಕ್ತ ಮಹಿಳೆಯರಿಗೆ ನೆರವು, ಮತ್ತು ವಿದ್ಯಾರ್ಥಿಗಳಿಗೆ
ಪ್ರತಿಭಾ ಪುರಸ್ಕಾರ ನೀಡಲಾಯಿತು.

ನಾಗರತ್ನ ಹೇರ್ಳೆ ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ಭಾರತಿ ಪ್ರಕಾಶ್ ಹೇರ್ಳೆ ಸದಸ್ಯರ ವಿವರಪಟ್ಟಿ ವಾಚಿಸಿದರು. ಜೊತೆ ಕಾರ್ಯದರ್ಶಿ ವಸುಧಾ ಉಡುಪ ವಂದನಾರ್ಪಣೆಗೈದರು.

ಶುಭ ಭಾಗವತ ಮತ್ತು ತಂಡ ಹಾಗೂ ಅಮೃತ ಉಪಾಧ್ಯ ಮತ್ತು ತಂಡದವರಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಪೂರ್ಣಿಮಾ ಅಧಿಕಾರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!