Friday, September 20, 2024
Friday, September 20, 2024

ಸ್ವಯಂವ್ಯಕ್ತ ಕ್ಷೇತ್ರ ಪುಷ್ಕರದಲ್ಲಿ ಪುತ್ತಿಗೆ ಶ್ರೀಪಾದರಿಗೆ ಅದ್ಧೂರಿಯ ಸ್ವಾಗತ

ಸ್ವಯಂವ್ಯಕ್ತ ಕ್ಷೇತ್ರ ಪುಷ್ಕರದಲ್ಲಿ ಪುತ್ತಿಗೆ ಶ್ರೀಪಾದರಿಗೆ ಅದ್ಧೂರಿಯ ಸ್ವಾಗತ

Date:

ಉಡುಪಿ, ಜೂನ್ 7: ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಪುಷ್ಕರ ಕ್ಷೇತ್ರಕ್ಕೆ ಆಗಮಿಸಿದ ಭಾವಿ ಪರ್ಯಾಯ ಪುತ್ತಿಗೆ ಶ್ರೀಪಾದರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಅವರ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರನ್ನು ಅಖಿಲ ಭಾರತೀಯ ಮಾಲಿ ಸೇವಾ ಸದನ ಸಂಸ್ಥಾನದ ವತಿಯಿಂದ ಅಧ್ಯಕ್ಷರಾದ ಓಂ ಪ್ರಕಾಶ್ ಸಂಖಾಲಾ ಬರಮಾಡಿಕೊಂಡು ಉಪಾಧ್ಯಕ್ಷ ರೂಪ್ ಚಂದ್ ಮರೋಹಿತ, ಅಜ್ಮೀರ್ ರಾಜ್ಯ ವಿಭಾಗದ ಕಾರ್ಯದರ್ಶಿ ಮುಖೇಶ್ ಕುಮಾರ್, ಅಜ್ಮೀರ್ ಜಿಲ್ಲೆಯ ಮುಜರಾಯಿ ಸಚಿವ ಅಗ್ನಿ ರಾವತ್, ಪಂಡಿತರಾದ ಸೃಷ್ಟಿ, ತಾರಾಚಂದ್, ಸತ್ಯನಾರಾಯಣ ಭಟ್ ಜೀ ಮುಂತಾದ ಗಣ್ಯರ ಸಮ್ಮುಖದಲ್ಲಿ ರಾಜಸ್ಥಾನೀಯ ಸಾಂಪ್ರದಾಯಿಕ ಶೈಲಿಯಲ್ಲಿ ಪೇಟ ತೊಡಿಸಿ, ಅಭಿನಂದನೆಯನ್ನು ಸಲ್ಲಿಸಲಾಯಿತು.

ಬ್ರಹ್ಮಸರೋವರ ಸ್ನಾನಗೈದ ಶ್ರೀಪಾದರು ಬ್ರಹ್ಮ ದೇವಾಲಯ ಹಾಗೂ ಶ್ರೀವೈಷ್ಣವ ಸಂಪ್ರದಾಯದ ವೇಣುಗೋಪಾಲದೇವರ ದರ್ಶನ ಪಡೆದರು. ಅಭಿನಂದನೆಯನ್ನು ಸ್ವೀಕರಿಸಿದ ಪುತ್ತಿಗೆ ಶ್ರೀಗಳು ವರಾಹ ದೇವರಿಂದ ಉದ್ಭವಿಸಿದ ಪುಷ್ಕರ ತೀರ್ಥ ಬ್ರಹ್ಮಸರೋವರದ ಮಹತ್ವವನ್ನು ತಿಳಿಸಿ, ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆಯನ್ನು ನೆರೆದ ಗಣ್ಯರಿಗೆಲ್ಲಾ ನೀಡಿದರು. ಪರ್ಯಾಯದ ಸಂದರ್ಭದಲ್ಲಿ ಉಡುಪಿಗೆ ಶ್ರೀಕೃಷ್ಣ ದರ್ಶನಕ್ಕೆ ಬರುವಂತೆ ಆಹ್ವಾನವಿತ್ತರು. ಅಲ್ಲಿನ ಭಕ್ತ ಜನತೆ ಪಂಡಿತ ಮಂಡಳಿ ಮುಂಬರುವ ನವೆಂಬರ್ ನಲ್ಲಿ ನಡೆಯುವ ಬೃಹತ್ ಕುಂಭಮೇಳಕ್ಕೆ ಪುತ್ತಿಗೆ ಶ್ರೀಪಾದದ್ವಯರಿಗೆ ಆದರದ ಆಮಂತ್ರಣವನ್ನಿತ್ತರು. ಶ್ರೀ ಪುತ್ತಿಗೆ ಮಠದ ಗೀತಾ ಪ್ರಚಾರಕರಾದ ಕೆ. ರಮೇಶ್ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!