Saturday, October 19, 2024
Saturday, October 19, 2024

ತೆಂಕನಿಡಿಯೂರು ಕಾಲೇಜಿನ ವಾರ್ಷಿಕೋತ್ಸವ

ತೆಂಕನಿಡಿಯೂರು ಕಾಲೇಜಿನ ವಾರ್ಷಿಕೋತ್ಸವ

Date:

ಉಡುಪಿ, ಜೂ. 23: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ 2022-23ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಡುಪಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ ವಾರ್ಷಿಕೋತ್ಸವಕ್ಕೆ ಶುಭ ಕೋರುತ್ತಾ, ತೆಂಕನಿಡಿಯೂರು ವಿದ್ಯಾ ಸಂಸ್ಥೆ ಪಠ್ಯ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ಖಾಸಗಿ ವಿದ್ಯಾಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ಸಾಧಿಸಿರುವುದು ಶ್ಲಾಘನೀಯವೆಂದರು. ಇನ್ನೋರ್ವ ಮುಖ್ಯ ಅತಿಥಿ ಮಾಜಿ ಶಾಸಕರಾದ ಕೆ. ರಘುಪತಿ ಭಟ್ ಮಾತನಾಡಿ, ಸರಕಾರಿ ಕಾಲೇಜುಗಳಲ್ಲಿ ಮೊದಲಿಗೆ ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಆರಂಭಿಸಿದ ಹೆಗ್ಗಳಿಕೆಯಿರುವ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಇದುವರೆಗೆ ಒಟ್ಟು 48 ರ‍್ಯಾಂಕ್‌ಗಳನ್ನು ಗಳಿಸಿ ರಾಜ್ಯದ ಪ್ರತಿಷ್ಠಿತ ಸರಕಾರಿ ಕಾಲೇಜುಗಳಲ್ಲಿ ಒಂದಾಗಿದೆ. ಅಲ್ಲದೆ ಈ ಸಂಸ್ಥೆಯು ಆರ್ಥಿಕವಾಗಿ ಹಿಂದುಳಿದ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಖರ್ಚಿನಲ್ಲಿ ಉನ್ನತ ಶಿಕ್ಷಣದ ಕನಸನ್ನು ಸಾಕಾರಗೊಳಿಸಲು ಪ್ರೇರಣೆಯಾಗಲಿದೆಯೆಂದರು.

ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಹೆಚ್ಚುವರಿ ನಿರ್ದೇಶಕರಾದ ರಾಜಶೇಖರ ಹೆಬ್ಬಾರ್ ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಸಿಗುವ ಸೌಲಭ್ಯಗಳು ಹಾಗೂ ಮಾರ್ಗದರ್ಶನದ ಸಂಪೂರ್ಣ ಪ್ರಯೋಜನ ಪಡೆದುಕೊಂಡು ತಮ್ಮ ವೃತ್ತಿ ಭವಿಷ್ಯ ರೂಪಿಸಿಕೊಳ್ಳುವಂತೆ ಸಲಹೆಯಿತ್ತರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಮಾತನಾಡಿ, ತೆಂಕನಿಡಿಯೂರಿನಲ್ಲಿ ಕೆ.ಜಿ.ಯಿಂದ ಪಿ.ಜಿ. ತನಕದ ಉನ್ನತ ಶಿಕ್ಷಣದ ಸೌಲಭ್ಯ ಪಡೆಯುವಂತಾದದ್ದು ನಿಜಕ್ಕೂ ಹೆಮ್ಮೆಯ ವಿಚಾರವೆಂದರು. ಕಾರ್ಯಕ್ರಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ರ‍್ಯಾಂಕ್ ವಿಜೇತ ಒಂಬತ್ತು ಮಂದಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿ ವಿಜೇತರು ಹಾಗೂ ಸಾಧಕರಿಗೆ ಬಹುಮಾನ ವಿತರಿಸಲಾಯಿತು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಧಾಕೃಷ್ಣ, ಡಾ. ದುಗ್ಗಪ್ಪ ಕಜೆಕಾರ್, ಐಕ್ಯುಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ನಾಯಕರಾದ ಯಮುನಪ್ಪ ಮತ್ತು ಸ್ಪಂದನ ಮಯ್ಯ ಕಾರ್ಯದರ್ಶಿಗಳಾದ ದಿಶಾ ಕೆ.ಜಿ ಮತ್ತು ಅನ್ವಿತಾ ಜಿ.ವಿ ಹಾಗೂ ಶಿಕ್ಷಕ-ರಕ್ಷಕ ಸಂಘದ ಸುಜಾತ, ಕಾಲೇಜು ಅಭಿವೃದ್ಧಿ ಸಮಿತಿಯ ಕೋಶಾಧಿಕಾರಿ ದಯಾನಂದ ಶೆಟ್ಟಿ, ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರತಿನಿಧಿ ಸ್ಪಂದನ ಮಯ್ಯ ವಂದಿಸಿದರು. ಕನ್ನಡ ಸಹ ಪ್ರಾಧ್ಯಾಪಕರಾದ ವೆಂಕಟೇಶ್ ಹೆಚ್.ಕೆ ಮತ್ತು ಸಹಾಯಕ ಪ್ರಾಧ್ಯಾಪಕ ಡಾ. ರಘು ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಜರಗಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!