Home ಸುದ್ಧಿಗಳು ಪ್ರಾದೇಶಿಕ ಪುತ್ತಿಗೆ ಪರ್ಯಾಯ ಕಟ್ಟಿಗೆ ಮುಹೂರ್ತ ಸಂಪನ್ನ

ಪುತ್ತಿಗೆ ಪರ್ಯಾಯ ಕಟ್ಟಿಗೆ ಮುಹೂರ್ತ ಸಂಪನ್ನ

270
0

ಉಡುಪಿ, ಜೂ. 26: ಪುತ್ತಿಗೆ ಪರ್ಯಾಯ 2024-26 ಪೂರ್ವಭಾವಿಯಾಗಿ ನಡೆಯುವ ಮುಹೂರ್ತಗಳಲ್ಲಿ ಒಂದಾದ ಕಟ್ಟಿಗೆ ಸಂಗ್ರಹ ಮುಹೂರ್ತವು ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಆದೇಶದಂತೆ ಸೋಮವಾರ ಶ್ರೀಕೃಷ್ಣ ಮಠದ ಕಟ್ಟಿಗೆ ರಥವಿರುವ ಸ್ಥಳದಲ್ಲಿ ಸಂಪನ್ನಗೊಂಡಿತು. ವಿದ್ವಾನ್ ಹೆರ್ಗ ವೇದವ್ಯಾಸ ಭಟ್ ಹಾಗೂ ರಾಘವೇಂದ್ರ ಕೊಡಂಚರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು.

ಪಟ್ಟದ ದೇವರು ಶ್ರೀ ಉಪೇಂದ್ರ ವಿಠಲ ದೇವರಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಚಂದ್ರಮೌಳೀಶ್ವರ ಹಾಗೂ ಅನಂತೇಶ್ವರ, ಶ್ರೀಕೃಷ್ಣ ಮಠದಲ್ಲಿ ಪ್ರಾರ್ಥನೆ, ನವಗ್ರಹದಾನವನ್ನು ಈ ಸಂದರ್ಭದಲ್ಲಿ ನಡೆಸಲಾಯಿತು. ಶ್ರೀಕೃಷ್ಣ ಮಠದ ಪದ್ಮನಾಭ ಮೇಸ್ತ್ರಿ ನೇತೃತ್ವದಲ್ಲಿ ಕಟ್ಟಿಗೆಯನ್ನು ಸಂಗ್ರಹಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಅಷ್ಟಮಠದ ಪ್ರತಿನಿಧಿಗಳು, ಆನೆಗುಡ್ಡೆ ದೇವಸ್ಥಾನದ ಅರ್ಚಕರಾದ ಸೂರ್ಯನಾರಾಯಣ ಉಪಾಧ್ಯಾಯ, ಶ್ರೀಧರ ಉಪಾಧ್ಯಾಯ, ಕೇಂಜ ಶ್ರೀಧರ ತಂತ್ರಿ, ಬಿ. ಗೋಪಾಲಾಚಾರ್ಯ, ಬ್ರಾಹ್ಮಣ ಸಭೆಯ ಅಧ್ಯಕ್ಷರಾದ ಮಂಜುನಾಥ ಉಪಾಧ್ಯಾಯ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ನೆರೆದ ಗಣ್ಯರಿಗೆ ಸಿದ್ದಿ ತಳಿಯ ವಿಶೇಷ ಹಲಸಿನ ಸಸಿಗಳನ್ನು ವಿತರಿಸಲಾಯಿತು. ಶ್ರೀಮಠದ ದಿವಾನರಾದ ಮುರಳೀಧರ ಆಚಾರ್ಯ, ನಾಗರಾಜ ಆಚಾರ್ಯ, ಶ್ರೀಪಾದರ ಆಪ್ತ ಕಾರ್ಯದರ್ಶಿಗಳಾದ ಪ್ರಸನ್ನಾಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.