Monday, September 7, 2026
Monday, September 7, 2026

ತ್ರಿಶಾ ವಿದ್ಯಾ ಪಿಯು ಕಾಲೇಜು: ಸೇತುಬಂಧ ಕಾರ್ಯಾಗಾರ

ತ್ರಿಶಾ ವಿದ್ಯಾ ಪಿಯು ಕಾಲೇಜು: ಸೇತುಬಂಧ ಕಾರ್ಯಾಗಾರ

Date:

ಕಟಪಾಡಿ, ಜೂನ್ 29: ಕಟಪಾಡಿಯ ತ್ರಿಶಾ ವಿದ್ಯಾ ಪಿ.ಯು ಕಾಲೇಜಿನಲ್ಲಿ ಸೇತುಬಂಧ ಕಾರ್ಯಾಗಾರ ನಡೆಯಿತು. ಮೊದಲನೆಯ ದಿನ ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಂತ್ ಪೈ ಇವರು ವಿದ್ಯಾರ್ಥಿಗಳಿಗೆ ಸಂಸ್ಕ್ರತಿ ಹಾಗೂ ಕಾಲೇಜು ನಿಯಮದ ಬಗ್ಗೆ ತಿಳಿಸಿದರು. ತ್ರಿಶಾ ಸಂಸ್ಥೆಯ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾಗಿರುವ ಜಯದೀಪ್ ಇವರು ಸಂವಹನಗಳ ಬಗ್ಗೆ ಚಟಿವಟಿಕೆಗಳನ್ನು ನಡೆಸಿಕೊಟ್ಟರು. ಎರಡನೆಯ ದಿನ ‘ಇಂಪಾಸಿಬಲ್ ಟು ಪಾಸಿಬಲ್’ – ಅಸಾಧ್ಯದಿಂದ ಸಾಧ್ಯದೆಡೆಗೆ ಎನ್ನುವ ಕಾರ್ಯಾಗಾರವನ್ನು ಸಂಪನ್ಮೂಲ ವ್ಯಕ್ತಿಗಳಾದ ಜೈಕಿಶನ್ ಭಟ್ ನೆರವೇರಿಸಿದರು. ಮೂರನೆಯ ದಿನ ಪಠ್ಯಕ್ರಮದ ವಿಷಯಗಳ ಬಗ್ಗೆ ಸೇತು-ಬಂಧ ಕಾರ್ಯಾಗಾರ ನಡೆಯಿತು. ವಾಣಿಜ್ಯ ವಿಷಯದ ಕುರಿತು ಜಯದೀಪ್, ಮೂಲಗಣಿತವನ್ನು ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್, ಹಣ ಮತ್ತು ಹೂಡಿಕೆಯ ಕುರಿತಾಗಿ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರಾದ ಗುರುಪ್ರಸಾದ್ ರಾವ್ ತಿಳಿಸಿಕೊಟ್ಟರು. ನಂತರ ತ್ರಿಶಾ ಕಾಲೇಜಿನ ಕನ್ನಡ ಪ್ರಾಧ್ಯಪಕ ಧೀರಜ್ ಬೆಳ್ಳಾರೆ ಜೀವನ ಮೌಲ್ಯಗಳನ್ನು ಚಟುವಟಿಕೆ ನೆರವೇರಿಸಿದರು.

ನಾಲ್ಕನೆಯ ದಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಗಣಿತ, ರಾಸಾಯನಶಾಸ್ತ್ರ, ಭೌತಶಾಸ್ತ್ರ ಮತ್ತು ಗಣಕಯಂತ್ರದ ತರಬೇತಿ ನೀಡಲಾಯಿತು. ನಂತರ ರಾಷ್ಟ್ರಮಟ್ಟದ ಜೆ.ಸಿ.ಐ ತರಬೇತುದಾರರಾದ ರಾಜೇಂದ್ರ ಭಟ್.ಕೆ ಇವರು ‘Different levels of Success’ ಎನ್ನುವ ವಿಷಯದ ಮೇಲೆ ತಮ್ಮ ಜೀವನದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಐದನೆಯ ದಿನ ಸಿ.ಎ ಗಿರಿಧರ್ ಕಾಮತ್ ಇವರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ಹಲವಾರು ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಸ್ಫೂರ್ತಿ ತುಂಬಿ ಸೇತುಬಂಧ ಕಾರ್ಯಾಗಾರವನ್ನು ಸಂಪನ್ನಗೊಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!