Monday, February 24, 2025
Monday, February 24, 2025

ವಿ.ಕೆ.ಆರ್: ಸಮಯ ಪರಿಪಾಲನೆ ಮತ್ತು ಅಧ್ಯಯನ ಕೌಶಲ ಕಾರ್ಯಗಾರ

ವಿ.ಕೆ.ಆರ್: ಸಮಯ ಪರಿಪಾಲನೆ ಮತ್ತು ಅಧ್ಯಯನ ಕೌಶಲ ಕಾರ್ಯಗಾರ

Date:

ಕುಂದಾಪುರ, ಜೂನ್ 29: ಬದುಕಿನಲ್ಲಿ ಗುರಿ ಇರಬೇಕು. ಅದೇ ರೀತಿ ಕಷ್ಟಗಳನ್ನು ಎದುರಿಸಿ ಎದೆಗುಂದದೆ ಛಲದಿಂದ ಮುಂದುವರಿದಾಗ ಗೆಲುವು ನಮ್ಮದಾಗುತ್ತದೆ. ಗೆಲುವು ಸಾಧಿಸಬೇಕಾದರೆ ನಮ್ಮಲ್ಲಿ ಗುರಿ ಇಟ್ಟುಕೊಂಡು ಮುಂದೆ ಸಾಗುವುದು ಬಹಳ ಮುಖ್ಯ. ಇಲ್ಲವಾದಲ್ಲಿ ಮೌಸ್ ಮತ್ತು ಕೀಲಿಮಣೆ ಇಲ್ಲದ ಕಂಪ್ಯೂಟರ್‌ನಂತೆ ಆಗುತ್ತದೆ. ನಮಗೆ ನಾವೇ ಪ್ರೇರಣೆಯಾಗಬೇಕು ಎಂದು ಸಂಪನ್ಮೂಲ ವ್ಯಕ್ತಿ ಶಿರಿಯಾರ ಗಣೇಶ್ ನಾಯಕ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಬಿ. ಎಂ. ಸುಕುಮಾರ ಶೆಟ್ಟಿ ನೇತೃತ್ವದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಂ. ಎಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ‘ಸಮಯ ಪರಿಪಾಲನೆ ಮತ್ತು ಅಧ್ಯಯನ ಕೌಶಲ’ ಕಾರ್ಯಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ಚಿಂತನಾ ರಾಜೇಶ್ ವಹಿಸಿದ್ದರು. ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್ ಪ್ರಾಸ್ತಾವಿಕ ಮಾತಿನೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಗದೀಶ್ ಆಚಾರ್, ಪೂರ್ವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲತಾ ಜಿ. ಭಟ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!