Monday, February 24, 2025
Monday, February 24, 2025

ಸಿಬ್ಬಂದಿಗಳ ಕಾರ್ಯದಕ್ಷತೆ ಬ್ಯಾಂಕಿನ ಅಭಿವೃದ್ದಿಗೆ ಪೂರಕವಾಗಲಿ: ಶಾಸಕ ಯಶ್ಪಾಲ್ ಸುವರ್ಣ

ಸಿಬ್ಬಂದಿಗಳ ಕಾರ್ಯದಕ್ಷತೆ ಬ್ಯಾಂಕಿನ ಅಭಿವೃದ್ದಿಗೆ ಪೂರಕವಾಗಲಿ: ಶಾಸಕ ಯಶ್ಪಾಲ್ ಸುವರ್ಣ

Date:

ಉಡುಪಿ, ಜೂನ್ 30: ಸಿಬ್ಬಂದಿಗಳ ಕಾರ್ಯದಕ್ಷತೆ ಹಾಗೂ ಗ್ರಾಹಕ ಸ್ನೇಹಿ ಸೇವೆ ಮಹಾಲಕ್ಷ್ಮೀ ಬ್ಯಾಂಕಿನ ಅಭಿವೃದ್ದಿಗೆ ಪೂರಕವಾಗಿದ್ದು, ಈ ತರಬೇತಿ ಕಾರ್ಯಗಾರದ ಮೂಲಕ ತಮ್ಮ ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿ ಎಂದು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಉಡುಪಿ ಡಯಾನಾ ಹೋಟೆಲ್ ಸಭಾಂಗಣದಲ್ಲಿ ಬ್ಯಾಂಕಿನ ಸಿಬ್ಬಂದಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾದ ಪ್ರೊ. ಮೇಜರ್ ರಾಧಾಕೃಷ್ಣ ಸಿಬ್ಬಂದಿಗಳಿಗೆ ಕಾರ್ಯಗಾರದ ಮೂಲಕ ತರಬೇತಿ ನೀಡಿದರು.

ಬ್ಯಾಂಕಿನ ವೃತ್ತಿಪರ ನಿರ್ದೇಶಕರಾದ ಮಂಜುನಾಥ ಎಸ್ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬ್ಯಾಂಕಿನ ನಿರ್ದೇಶಕರಾದ ಶಿವರಾಮ್ ಕುಂದರ್, ಸುರೇಶ್ ಬಿ ಕರ್ಕೆರ ಹಾಗೂ ವನಜಾ ಪುತ್ರನ್ ಉಪಸ್ಥಿತರಿದ್ದರು.

ವ್ಯವಸ್ಥಾಪಕ ನಿರ್ದೇಶಕರಾದ ಜಗದೀಶ್ ಮೊಗವೀರ ಸ್ವಾಗತಿಸಿ, ಸಹಾಯಕ ಪ್ರಧಾನ ವ್ಯವಸ್ಥಾಪಕ (ಪ್ರಭಾರ) ಶಾರಿಕಾ ಕಿರಣ್ ವಂದಿಸಿದರು. ಬ್ಯಾಂಕಿನ ಸಿಬ್ಬಂದಿ ವಿಜೇತ ಶೆಟ್ಟಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.24: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!