Monday, February 24, 2025
Monday, February 24, 2025

ಉಡುಪಿ: ಚರಂಡಿಗಳಿಗೆ ಕಸ, ಕಡ್ಡಿ, ಪ್ಲಾಸ್ಟಿಕ್‌ಗಳನ್ನು ಎಸೆಯದಂತೆ ಸೂಚನೆ

ಉಡುಪಿ: ಚರಂಡಿಗಳಿಗೆ ಕಸ, ಕಡ್ಡಿ, ಪ್ಲಾಸ್ಟಿಕ್‌ಗಳನ್ನು ಎಸೆಯದಂತೆ ಸೂಚನೆ

Date:

ಉಡುಪಿ, ಜೂನ್ 30: ಉಡುಪಿ ನಗರಸಭಾ ವ್ಯಾಪ್ತಿಯ ಬನ್ನಂಜೆ ವಾರ್ಡಿನ ಮಠದಬೆಟ್ಟು ಕಿಂಡಿ ಅಣಿಕಟ್ಟಿನಲ್ಲಿ ಜೂನ್ 28 ರಂದು ಭಾರಿ ಪ್ರಮಾಣದ ಕಸ, ಮರ ಹಾಗೂ ಮರದ ರೆಂಬೆ ಕೊಂಬೆಗಳು ಬಂದು ಕಿಂಡಿ ಅಣಿಕಟ್ಟಿನ ಹತ್ತಿರ ಬ್ಲಾಕ್ ಆಗಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿರುತ್ತದೆ. ಅದರಂತೆ ನಗರಸಭೆಯಿಂದ ಸ್ಥಳ ಪರಿಶೀಲಿಸಲಾಗಿ ಸದರಿ ಪ್ರದೇಶದಲ್ಲಿ ಬ್ಲಾಕ್ ಆಗಿದ್ದ ಮರದ ರಾಶಿಗಳನ್ನು ಪೌರಕಾರ್ಮಿಕರಿಂದ ತೆರವುಗೊಳಿಸಲು ನೀರಿನ ರಭಸ ಹೆಚ್ಚಿದ್ದರಿಂದ ಅಸಾಧ್ಯವಾಗಿರುತ್ತದೆ. ಆದ್ದರಿಂದ ನಗರಸಭೆಯ ಜೆ.ಸಿ.ಬಿ.ಯನ್ನು ಬಳಸಿ ಸಂಜೆಯ ವೇಳೆಗೆ ಸಿಕ್ಕಿ ಹಾಕಿಕೊಂಡಿದ್ದ ಮರದ ರೆಂಬೆ ಕೊಂಬೆಗಳ ರಾಶಿಯನ್ನು ತೆರವುಗೊಳಿಸಲಾಗಿರುತ್ತದೆ. ಸದರಿ ತೆರವುಗೊಳಿಸುವ ಸಂದರ್ಭದಲ್ಲಿ ಬ್ರಿಡ್ಜಿನ ರೇಲಿಂಗ್ಸ್ನ ಕೆಲವು ಭಾಗದಲ್ಲಿ ಹಾನಿಯಾಗಿರುತ್ತದೆ.

ಸಾರ್ವಜನಿಕರು ಮಳೆ ನೀರು ಹರಿಯುವ ಚರಂಡಿಗಳಿಗೆ ಕಸ ಕಡ್ಡಿ, ಪ್ಲಾಸ್ಟಿಕ್, ಮರ ಗಿಡಗಳನ್ನು ಹಾಕಿದಾಗ ಈ ರೀತಿಯಲ್ಲಿ ಬಂದು ಬ್ಲಾಕ್ ಆಗಿ ಕೃತಕ ನೆರೆ ಉಂಟಾಗುವ ಸಂಭವವಿದ್ದು, ಇದರಿಂದಾಗಿ ಸಾರ್ವಜನಿಕರ ಆಸ್ತಿಗೆ ಹಾನಿಯಾಗುತ್ತದೆ ಮತ್ತು ಸಾರ್ವಜನಿಕರ ಹಣ ವ್ಯರ್ಥವಾಗಿ ಪೋಲಾಗುವುದರೊಂದಿಗೆ, ಸಾರ್ವಜನಿಕರು ಆಯಾತಪ್ಪಿ ಬಿದ್ದಲ್ಲಿ ಜೀವಹಾನಿಯಾಗುವ ಸಂಭವವಿರುತ್ತದೆ. ಆದ್ದರಿಂದ ಸಾರ್ವಜನಿಕರು ಮೇಲ್ಕಂಡ ವಿಷಯಗಳನ್ನು ಮನಗಂಡು ನಗರಸಭೆಯೊಂದಿಗೆ ಸಹಕರಿಸುವಂತೆ ಹಾಗೂ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!