Friday, October 18, 2024
Friday, October 18, 2024

ಬ್ರಹ್ಮಾವರ: ವೈದ್ಯರ ದಿನಾಚರಣೆ

ಬ್ರಹ್ಮಾವರ: ವೈದ್ಯರ ದಿನಾಚರಣೆ

Date:

ಉಡುಪಿ, ಜು. 10: ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಉಡುಪಿ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಬ್ರಹ್ಮಾವರ ರೋಯಲ್ ಇನ್ ಸಭಾಂಗಣದಲ್ಲಿ 21 ನೇ ವರ್ಷದ ವೈದ್ಯರ ದಿನಾಚರಣೆ ಮತ್ತು ವೈದ್ಯರ ಅಭಿನಂದನಾ ಸಮಾರಂಭ ನಡೆಯಿತು.

ಮುಖ್ಯ ಅತಿಥಿ ಕೆ.ಎಂ.ಸಿ ಮಣಿಪಾಲದ ಡೀನ್ ಯುರಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಪದ್ಮರಾಜ್ ಹೆಗ್ಡೆ ಮಾತನಾಡಿ, ವೈದ್ಯರು ತಮ್ಮ ಹೆಚ್ಚಿನ ಸಮಯವನ್ನು ರೋಗಿಗಳ ಸೇವೆಯಲ್ಲಿ ಕಳೆಯುತ್ತಾರೆ. ಆದರೆ ರೋಗಿಗಳಿಗೆ ತೊಂದರೆಯಾದಾಗ ವೈದ್ಯರಿಗೆ ತೊಂದರೆ ಕೊಡುವುದು ಸರಿಯಲ್ಲ. ಇವರ ಸೇವೆಯನ್ನು ಸಮಾಜ ಗುರುತಿಸಿ ಅವರಿಗೆ ಗೌರವ ನೀಡುತ್ತಿರುವುದು ಅಭಿನಂದನೀಯ ಎಂದರು.

ಐ.ಎಂ.ಎ ಉಡುಪಿ ಕರಾವಳಿ ಅಧ್ಯಕ್ಷ ಮತ್ತು ಎ.ವಿ ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ. ಪಿ.ವಿ ಭಂಡಾರಿ ಮಾತನಾಡಿ, ವೈದ್ಯರನ್ನು ವಿನಾಕಾರಣ ಹಲ್ಲೆ ಮಾಡುವುದು ಅವರ ಮೇಲೆ ಮಾನಸಿಕ ಕಿರುಕುಳ ನಡೆಯುತ್ತಿರುವುದು ಖಂಡನೀಯ. ವೈದ್ಯರ ಸಂಘದಿಂದ ಮಾತ್ರ ಈ ಹಿಂದೆ ವೈದ್ಯರನ್ನು ಗುರುತಿಸಲಾಗುತ್ತಿತ್ತು, ಆದರೆ ಇಂದು ಸಮಾಜದ ವಿವಿಧ ಸಂಘ- ಸಂಸ್ಥೆಗಳು ಈ ಕಾರ್ಯ ಮಾಡುತ್ತಿರುವುದು ಅಭಿನಂದನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಅಧ್ಯಕ್ಷ ವಿವೇಕಾನಂದ ಕಾಮತ್ ವಹಿಸಿದ್ದರು. ವೇದಿಕೆಯಲ್ಲಿ ವೈದ್ಯಕೀಯ ಪ್ರತಿನಿಧಿ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ, ಕಾರ್ಯದರ್ಶಿ ಪ್ರಸನ್ನ ಕಾರಂತ್, ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು, ಸುಂದರ ಪೂಜಾರಿ ಮೂಡುಕುಕ್ಕುಡೆ ಮುಂತಾದವರು ಉಪಸ್ಥಿತರಿದ್ದರು.

ಖ್ಯಾತ ವೈದ್ಯರುಗಳಾದ ಮಣಿಪಾಲ ಕೆ.ಎಂ.ಸಿ ಚರ್ಮರೋಗ ವಿಭಾಗದ ಪ್ರಾಧ್ಯಾಪಕ ಡಾ. ಸತೀಶ್ ಪೈ, ಹೈಟೆಕ್ ಆಸ್ಪತ್ರೆಯ ಮೂಳೆ ರೋಗ ತಜ್ಞ ಡಾ. ಉಮೇಶ್ ಪ್ರಭು ಯು., ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡರಂಗಡಿಯ ವೈದ್ಯಾಧಿಕಾರಿ ಡಾ. ಚಂದ್ರಿಕಾ ಕಿಣಿ, ಕೋಟ ಪಿ.ಹೆಚ್.ಸಿ ಆರೋಗ್ಯಾಧಿಕಾರಿ ಡಾ. ವಿಶ್ವನಾಥ್ ಬಿ ಇವರುಗಳನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸನ್ಮಾನಿತರು ಮಾತನಾಡಿದರು. ಹಿರಿಯ ಸಾಧಕ ವೈದ್ಯಕೀಯ ಪ್ರತಿನಿಧಿಗಳನ್ನು ಗುರುತಿಸಲಾಯಿತು. ಜಯಂಟ್ಸ್ ಕಾರ್ಯದರ್ಶಿ ಮಿಲ್ಟನ್ ಒಲಿವೇರಾ ವರದಿ ವಾಚಿಸಿದರು.

ಮಧುಸೂಧನ್ ಹೇರೂರು ಪ್ರಸ್ತಾವನೆಗೈದರು. ಅಂಬಿಕಾ, ಡೊರಿಸ್, ಸುಬ್ರಹ್ಮಣ್ಯ ಆಚಾರ್ಯ, ರಾಘವೇಂದ್ರ ಪ್ರಭು ಕರ್ವಾಲು ಪರಿಚಯಿಸಿದರು. ಅನಂತ್ ಹೊಳ್ಳ ನಿರೂಪಿಸಿದರು. ಪ್ರಸನ್ನ ಕಾರಂತ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!