Sunday, September 22, 2024
Sunday, September 22, 2024

ಸರಳ ಪರ್ಯಾಯೋತ್ಸವ, ದರ್ಬಾರ್ ಸಭೆ: ಸಮಿತಿ ಘೋಷಣೆ

ಸರಳ ಪರ್ಯಾಯೋತ್ಸವ, ದರ್ಬಾರ್ ಸಭೆ: ಸಮಿತಿ ಘೋಷಣೆ

Date:

ಉಡುಪಿ: ಬಹುನಿರೀಕ್ಷೆಯ ಧಾರ್ಮಿಕ ಉತ್ಸವ ನಾಡಹಬ್ಬ ಉಡುಪಿ ಪರ್ಯಾಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಅತೀ ಸರಳವಾಗಿ ನಡೆಸಲು ತೀರ್ಮಾನಿಸಿರುವುದಾಗಿ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.

ಸಮಿತಿ ಗೌರವಾಧ್ಯಕ್ಷ ಕೆ. ಸೂರ್ಯನಾರಾಯಣ ಉಪಾಧ್ಯಾಯ ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಶನಿವಾರ ರಾತ್ರಿ ನಡೆದ ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಸಮಿತಿ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ‌ ಕೈಗೊಳ್ಳಲಾಗಿದೆ .

ಕೋವಿಡ್ ಪರಿಸ್ಥಿತಿ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರ್ಣವಾಗಿ ಸಹಕರಿಸಬೇಕೆನ್ನುವ ಭಾವೀ ಪರ್ಯಾಯ ಶ್ರೀ ಕೃಷ್ಣಾಪುರ ಶ್ರೀಪಾದರ ಆಶಯದಂತೆ ಜನವರಿ 17 ರ ನಡುರಾತ್ರಿ ನಡೆಯಲಿರುವ (18 ರ ನಸುಕಿನ ವೇಳೆ) ನಡೆಯಲಿರುವ ಬಹುನಿರೀಕ್ಷೆಯ ಪರ್ಯಾಯೋತ್ಸವ ಮೆರವಣಿಗೆ ಮತ್ತು ನಂತರ ರಾಜಾಂಗಣದಲ್ಲಿ ನಡೆಯಲಿರುವ ಪರ್ಯಾಯ ದರ್ಬಾರ್ ಸಭೆಯನ್ನು ತೀರಾ ಸಾಂಪ್ರದಾಯಿಕತೆಗೆ ಆದ್ಯತೆ ನೀಡಿ ತೀರಾ ಸರಳವಾಗಿ ನಡೆಸಲು ನಿರ್ಧರಿಸಲಾಗಿದೆ.

ಈ ಕಾರ್ಯಕ್ರಮಗಳನ್ನು ವಿವಿಧ ಟಿ ವಿ ವಾಹಿನಿಗಳಲ್ಲಿ ನೇರಪ್ರಸಾರ ಮಾಡಲಾಗುವುದು. ಆದ್ದರಿಂದ ಭಕ್ತಾದಿಗಳು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಂಡು ಸಹಕರಿಸಬೇಕೆಂದು ಭಕ್ತರು ಮತ್ತು ನಾಗರಿಕರಲ್ಲಿ ನಮ್ರರಾಗಿ ವಿನಂತಿಸುತ್ತೇವೆ.‌ ಈ ಹಿನ್ನೆಲೆಯಲ್ಲಿ ಪರ್ಯಾಯೋತ್ಸವ ಮೆರವಣಿಗೆಯಲ್ಲಿ ಉತ್ಸವ ಸಮಿತಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಿದ್ಧಪಡಿಸಲಾಗಿದ್ದ ಜಾನಪದ ತಂಡಗಳನ್ನು ಮತ್ತು ಕೆಲವು ಟ್ಯಾಬ್ಲೋಗಳನ್ನು ರದ್ದುಪಡಿಸಿದ್ದೇವೆ.

ಅಷ್ಟ ಮಠಾಧೀಶರು ಕುಳಿತುಕೊಳ್ಳುವ ಮೇನೆಯನ್ನು ಹೊತ್ತ ವಾಹನಗಳು, ವಾದ್ಯ, ಚಂಡೆ, ಡೋಲು, ಬಿರುದಾವಳಿ ಮತ್ತು ಕೇವಲ ಪೌರಾಣಿಕ ದೃಶ್ಯಾವಳಿಗಳನ್ನೊಳಗೊಂಡ ಟ್ಯಾಬ್ಲೋಗಳು ಮಾತ್ರ ಮೆರವಣಿಗೆಯಲ್ಲಿ ಇರುತ್ತವೆ. ಪರ್ಯಾಯ ದರ್ಬಾರ್ ಸಭೆಯಲ್ಲೂ ಸೀಮಿತ ಸಂಖ್ಯೆಯ ಆಸನ ವ್ಯವಸ್ಥೆ ಇರುತ್ತದೆ. ಇವುಗಳನ್ನು ಜನತೆ ಅಗತ್ಯವಾಗಿ ಗಮನಿಸಬೇಕು.

ಎರಡು ಕೋವಿಡ್ ಲಸಿಕೆಗಳನ್ನು ಪಡೆದವರಿಗೆ ಮಾತ್ರ ಉತ್ಸವದಲ್ಲಿ ಭಾಗವಹಿಸಲು ಆದ್ಯತೆ ನೀಡಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ಜಿಲ್ಲಾಡಳಿತದೊಂದಿಗೆ ಪೂರ್ಣ ಸಹಕರಿಸಲಿದ್ದು ಜನತೆಯೂ ಸಹಕರಿಸುವಂತೆ ಮತ್ತೊಮ್ಮೆ ವಿನಂತಿಸುತ್ತೇವೆ ಎಂದು ಕಾರ್ಯಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!