Thursday, February 27, 2025
Thursday, February 27, 2025

ತ್ರಿಶಾ ಕ್ಲಾಸಸ್: ಸಿ.ಎ. ಮತ್ತು ಸಿ.ಎಸ್. ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ತ್ರಿಶಾ ಕ್ಲಾಸಸ್: ಸಿ.ಎ. ಮತ್ತು ಸಿ.ಎಸ್. ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Date:

ಉಡುಪಿ, ಜು. 17: ಸಿ.ಎ. ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್ ಗಳ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ.ಎ ಫೈನಲ್ ಇಂಟರ್ ಮೀಡಿಯೆಟ್ ಮತ್ತು ಸಿ.ಎಸ್. ಎಕ್ಸಿಕ್ಯೂಟಿವ್ ಉತ್ತೀರ್ಣರಾದ 80ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿಎ ಗೋಪಾಲಕೃಷ್ಣ ಭಟ್ ಅವರು, ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ವಿದ್ಯಾರ್ಥಿಗಳ ಸಾಧನೆಗೆ ಬಹಳ ಹೆಮ್ಮೆ ಎನಿಸುತ್ತಿದೆ. ಅದರಲ್ಲಿ ಪೋಷಕರ ಪಾತ್ರ ಬಹಳ ದೊಡ್ದದು ಹಾಗೂ ಸಿ.ಎ ಸಿ.ಎಸ್ ವಿದ್ಯಾರ್ಥಿಗಳಲ್ಲಿ ಸಾಧನೆ ಮಾಡಿಯೇ ಮಾಡುತ್ತೇನೆಂಬ ಕಿಚ್ಚು ಇರಬೇಕು ಅದರಿಂದಲೇ ಯಶಸ್ಸು ಸಾಧ್ಯ ಎಂದರು. ಬಳಿಕ ಐ.ಸಿ.ಏ.ಐ ನ ಹೊಸ ಸ್ಕೀಮ್ ಪ್ರಕಾರ ಆರ್ಟಿಕಲ್ ಷಿಪ್ ಬಗೆಗಿನ ಹೊಸ ವಿಧಾನಗಳನ್ನು ವಿವರಿಸಿದರು.

ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ (ಆಲ್ ಇಂಡಿಯಾ ರ್ಯಾಂಕ್) 10 ನೇ ರ್ಯಾಂಕ್ ಗಳಿಸಿದ ದೀಪಕ್ ಹೆಗ್ಡೆ (653) ಹಾಗೂ 50ನೇ ರ್ಯಾಂಕ್ ಗಳಿಸಿದ ಪ್ರಜ್ವಲ್ ಏ ಮೌಲ್ಯ (591) ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು ಹಾಗೂ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಹೆತ್ತವರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು ನಂತರ ವಿದ್ಯಾರ್ಥಿಗಳು ಅವರ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಸಿದ್ಧಾಂತ್ ಫೌಂಡೇಶನ್ ನ ಟ್ರಸ್ಟಿ ನಮಿತಾ ಜಿ. ಭಟ್ ತ್ರಿಶಾ ಕ್ಲಾಸಸ್ ಉಡುಪಿ ಕೇಂದ್ರದ ಮುಖ್ಯಸ್ಥರಾದ ವಿಘ್ನೇಶ್ ಶೆಣೈ ಬಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕ್ಷಿತಿ ಶೆಣೈ ನಿರೂಪಿಸಿ, ಕೇಂದ್ರ ಮುಖ್ಯಸ್ಥ ವಿಘ್ನೇಶ್ ಶೆಣೈ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!