Wednesday, February 26, 2025
Wednesday, February 26, 2025

ಡಾ. ಶೆಟ್ಟಿ ಸಂಶೋಧಿಸಿದ ಅಲ್ಝೈಮರ್ಸ್ ಔಷಧಿಗೆ ಅಮೇರಿಕಾದ ಪೇಟೆಂಟ್

ಡಾ. ಶೆಟ್ಟಿ ಸಂಶೋಧಿಸಿದ ಅಲ್ಝೈಮರ್ಸ್ ಔಷಧಿಗೆ ಅಮೇರಿಕಾದ ಪೇಟೆಂಟ್

Date:

ಉಡುಪಿ, ಜು. 17: ಡಾ. ಕೃಷ್ಣ ಲೈಫ್ ಸೈನ್ಸಸ್ ಲಿಮಿಟೆಡ್ ಮಣಿಪಾಲದ ಎಂ.ಡಿ ಡಾ. ಎಂ. ವಿಜಯಭಾನು ಶೆಟ್ಟಿಯವರು ಅಭಿವೃದ್ಧಿಪಡಿಸಿದ ಅಲ್ಝೈಮರ್ಸ್ ಮತ್ತು ಪಾರ್ಕಿನ್‌ಸೋನಿಸಮ್‌ನ ಆಯುರ್ವೇದ ಔಷಧಿ ಮುನಿಪ್ರಜ್ಞಾ ಮಾತ್ರೆಗಳಿಗೆ ಅಮೆರಿಕಾದ ಡೈರೆಕ್ಟರ್ ಆಫ್ ಪೇಟೆಂಟ್ ಆ್ಯಂಡ್ ಟ್ರೇಡ್ ಮಾರ್ಕ್ ಆಫೀಸಿನಿಂದ ಪೇಟೆಂಟ್ ಲಭಿಸಿರುತ್ತದೆ. ಇವರು ತಯಾರಿಸಿದ ಸಿಹಿಮೂತ್ರ ರೋಗದ ಇನ್ಸೋಲ್-ಎನ್, ಹೃದಯ ರಕ್ಷಣೆಯ ಹಾರ್ಟೋಜನ್, ಕ್ಯಾನ್ಸರ್ ಕಾಯಿಲೆ ಚಿಕಿತ್ಸೆಯ ಮುನೆಕ್ಸ್, ಮೂತ್ರಕೋಶದ ತೊಂದರೆಗಳಿಗೆ ಮುನಿಪ್ರಭಾ, ಮಾದಕದ್ರವ್ಯ ಚಟಬಿಡಿಸುವ ಹರ್ಬಾಡಿಕ್ಟ್, ಲಿಪಿಡ್ ಕೊಲೆಸ್ಟ್ರಾಲ್ ಹಿಡಿತದಲ್ಲಿಡುವ ಹರ್ಬೋಟ್ರಿಮ್, ಥೈರಾಯ್ಡ್ ತೊಂದರೆ ಶಮನದ ಮುನಿಥೈರಾನ್, ಗರ್ಭಾಶಯದ ಕಾಯಿಲೆಗೆ ಸೌಭಾಗ್ಯ ಕಲ್ಪ, ಹಲ್ಲು ಮತ್ತು ಒಸಡಿನ ರಕ್ಷಣೆಗೆ ಮುನಿಡೆಂಟ್, ರೋಗ ನಿರೋಧಕ ಶಕ್ತಿ ವೃದ್ಧಿಗೆ ಹಿರಣ್ಯಪ್ರಾಶ ಬಿಂದುಗಳು ಹಾಗೂ ಕ್ಯಾನ್ಸರ್ ಚಿಕಿತ್ಸಾಕ್ರಮವಾದ ಮಹೋಷದ ಕಲ್ಪ ಮೊದಲಾದವುಗಳಿಗೆ ಈಗಾಗಲೇ ಇಪ್ಪತ್ತು ವರ್ಷಗಳ ಅಮೆರಿಕಾ ಸರಕಾರದ ಪೇಟೆಂಟ್ ದೊರೆತಿದ್ದು ಈ ಸಾಧನೆ ಆಯುರ್ವೇದದ ಇತಿಹಾಸದಲ್ಲೇ ಅಪರೂಪವೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮುನಿಯಾಲು ಆಯುರ್ವೇದ ಸಂಸ್ಥೆಯು ಮಣಿಪಾಲದಲ್ಲಿ ಕಾಲೇಜು, ಸ್ನಾತಕೋತ್ತರ ಹಾಗೂ ಪಿ.ಹೆಚ್.ಡಿ ಕೋರ್ಸುಗಳು, ಯೋಗ ಮತ್ತು ನ್ಯಾಚುರೋಪತಿ ಕಾಲೇಜು, ಆಸ್ಪತ್ರೆಗಳು, ಚಿಕಿತ್ಸಾಲಯಗಳನ್ನು ನಡೆಸುತ್ತಿದ್ದು ಸಂಸ್ಥೆಯ ಶ್ರೇಷ್ಠ ಪ್ರಕಟಣೆಯಾದ ಸಚಿತ್ರ ಚರಕ ಸಂಹಿತವನ್ನು ಮಾಜಿ ರಾಷ್ಟ್ರಪತಿ ದಿ. ಅಬ್ದುಲ್ ಕಲಾಂ ಬಿಡುಗಡೆಗೊಳಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!