Thursday, February 27, 2025
Thursday, February 27, 2025

ಉಡುಪಿ: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ

ಉಡುಪಿ: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ

Date:

ಉಡುಪಿ, ಜು. 18: ಉಡುಪಿಯಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ನಡೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ. ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ ವೇಣುಗೋಪಾಲ ಇವರ ಹತ್ಯೆ, ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ. ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರತಿ ರವಿವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ಮಾಡಿ, ಗೋವಿನ ಎಲಬುಗಳನ್ನು ದೇವಸ್ಥಾನ, ಹಿಂದೂ ಮನೆಗಳ ಎದುರು ಎಸೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಹಿಂದೂ ಕಾರ್ಯಕರ್ತರಿಗೆ, ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು. ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಂದೋಲನದಲ್ಲಿ ಆಗ್ರಹಿಸಲಾಯಿತು.

ಅಪರ ಜಿಲ್ಲಾಧಿಕಾರಿಗಳಾದ ವೀಣಾ ಬಿ. ಎನ್. ಇವರ ಮೂಲಕ ರಾಜ್ಯಪಾಲರಿಗೆ ಮನವಿಯನ್ನೂ ಸಲ್ಲಿಸಲಾಯಿತು. ಶ್ರೀ ರಾಮ ಸೇನೆಯ ಉಡುಪಿ ಜಿಲ್ಲಾಧ್ಯಕ್ಷರಾದ ಜಯರಾಮ ಅಂಬೇಕಲ್ ಹಾಗೂ ಪ್ರಧಾನ ಕಾರ್ಯದರ್ಶಿ ಶರತ್ ಮಣಿಪಾಲ, ಭಾರತೀಯ ಜೈನ್ ಮಿಲನ್ ಸಂಘಟನೆಯ ಕಾರ್ಯಧ್ಯಕ್ಷರಾದ ಕೆ. ಪ್ರಸನ್ನ ಕುಮಾರ್, ಅಧ್ಯಕ್ಷರಾದ ದೀಪಾರಾಣಿ, ಕಾರ್ಯದರ್ಶಿಗಳಾದ ಶ್ವೇತಾ, ಸದಸ್ಯರಾದ ಡಾ ಆಕಾಶ ರಾಜ್, ಡಾ. ಮಾನಸ ಜೈನ್ ಮತ್ತು ವೈ ಸುಧೀರ್ ಎರ್ಮಾಳು ಇವರು ಮತ್ತು ಹಿಂದೂ ಜನಜಾಗೃತಿ ಸಮಿತಿಯ ವಿಶ್ವನಾಥ ನಾಯಕ್, ರತೀಶ್ ಶೆಟ್ಟಿ ಹಾಗೂ ದೇವೇಂದ್ರ ಪ್ರಭು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!