Saturday, October 19, 2024
Saturday, October 19, 2024

ಮಾನವಿಕಶಾಸ್ತ್ರ ಅಧ್ಯಯನಕ್ಕೆ ಮನಸ್ಸು ವಿಸ್ತಾರಗೊಳ್ಳಬೇಕು: ಪ್ರೊ. ಶೆಟ್ಟಿ

ಮಾನವಿಕಶಾಸ್ತ್ರ ಅಧ್ಯಯನಕ್ಕೆ ಮನಸ್ಸು ವಿಸ್ತಾರಗೊಳ್ಳಬೇಕು: ಪ್ರೊ. ಶೆಟ್ಟಿ

Date:

ಕಾರ್ಕಳ, ಜು. 18: ಮಾನವಿಕಶಾಸ್ತ್ರದ ವಿಷಯಗಳ ಅಧ್ಯಯನದಲ್ಲಿ ಜೀವಂತಿಕೆ ಇದೆ. ನಮ್ಮ ಕಲಿಕೆಯ ವಿಷಯಗಳು ನಮ್ಮ ನೆಲದಲ್ಲಿಯೇ ಹುಟ್ಟಿ ಬಂದ ವಿಷಯಗಳು, ಹಾಗಾಗಿ ವಿದ್ಯಾರ್ಥಿಗಳಲ್ಲಿ ಅಧ್ಯಯನದ ಆಸಕ್ತಿ ಮತ್ತು ಶ್ರೇಷ್ಠತೆಯನ್ನು ಕಾಣಬೇಕಾದರೆ ಸಾಮಾಜವನ್ನು ಕಣ್ಣು ತೆರೆದು ನೇೂಡುವ ಮನೇೂಭಾವ ಬೆಳೆಸಿಕೊಳ್ಳಬೇಕು. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ನಡೆಯುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್., ಐ.ಎ.ಎಸ್. ನಂತಹ ಪರೀಕ್ಷೆಗಳು ಕಲಾ ಅಧ್ಯಯನ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲಕರವಾಗಿದ್ದು ಈ ಸಾಧನೆ ತಮ್ಮದಾಗಿಸಲು ಇಚ್ಛಾಶಕ್ತಿ, ಗುರಿ ಸಾಧನೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ರಾಜ್ಯಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ರಾಜಕೀಯ ವಿಶ್ಲೇಷಕ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

ಕಾರ್ಕಳ ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜಿನ ಮಾನವಿಕಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಫೌಂಡೇಷನ್ ಕೇೂರ್ಸ್ 23 ಉದ್ಘಾಟಿಸಿ ಅವರು ವಿಶೇಷ ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಪದವಿಪೂರ್ವ ವಿಭಾಗದ ಪ್ರಾಂಶುಪಾಲ ಪ್ರೊ. ರಮೇಶ್ ಎಸ್.ಸಿ. ವಹಿಸಿ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉನ್ನತ ಶಿಕ್ಷಣ, ಉದ್ಯೋಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಪಾಠದ ಜೊತೆಗೆ ನುರಿತ ತಜ್ಞರಿಂದ ತರಬೇತಿ ಉಪನ್ಯಾಸ ನೀಡುವ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದ್ದೇವೆ. ಇದನ್ನು ವಿದ್ಯಾರ್ಥಿಗಳು ಸದುಪಯೇೂಗಪಡಿಸಿಕೊಳ್ಳಬೇಕೆಂದರು. ಫೌಂಡೇಶನ್ ಕೇೂರ್ಸ್ ಸಂಯೇೂಜಕಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಮಾಲಿನಿ ಜೈನ್ ಪ್ರಾಸ್ತಾವನೆಗೈದರು. ಕಲಾ ವಿಭಾಗದ ವಿದ್ಯಾರ್ಥಿಗಳಾದ ಡೊಮಿನಿಕ ಸುಹಾಸ್ ಸ್ವಾಗತಿಸಿ, ನುಮಾ ಐಶಾ ವಂದಿಸಿದರು. ಸ್ವಾತಿ ಅತಿಥಿಗಳನ್ನು ಪರಿಚಯಿಸಿದರು. ದೀಕ್ಷಿತ್ ಆರ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!