Sunday, September 22, 2024
Sunday, September 22, 2024

ಅಂಬಲಪಾಡಿ: ನವೀಕೃತ ಶ್ರೀ ರಾಮಾಂಜನೇಯ ಪೂಜಾ ಮಂದಿರದ ಪುನರ್ ಪ್ರತಿಷ್ಠೆ

ಅಂಬಲಪಾಡಿ: ನವೀಕೃತ ಶ್ರೀ ರಾಮಾಂಜನೇಯ ಪೂಜಾ ಮಂದಿರದ ಪುನರ್ ಪ್ರತಿಷ್ಠೆ

Date:

ಅಂಬಲಪಾಡಿ: ಖ್ಯಾತ ವ್ಯಾಯಾಮ ಶಿಕ್ಷಕರಾಗಿದ್ದ ಅಂಬಲಪಾಡಿ ದಿ. ಕುಸ್ತಿ ಐತಪ್ಪ ಸುವರ್ಣರವರಿಂದ ಸ್ಥಾಪಿಸಲ್ಪಟ್ಟಿದ್ದ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ನವೀಕೃತ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಇದರ ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಕುತ್ಪಾಡಿ ಕಾನಂಗಿ ಬಾಲಕೃಷ್ಣ ಭಟ್ ರವರ ಪೌರೋಹಿತ್ಯದಲ್ಲಿ ಸರಳ ರೀತಿಯಲ್ಲಿ ನೆರವೇರಿತು.

ಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಿದಿಯೂರು ಇವರಿಂದ ಭಜನಾ ಸೇವೆ ನಡೆಯಿತು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು.

ದಿ. ಕುಸ್ತಿ ಐತಪ್ಪ ಸುವರ್ಣರವರ ಶಿಷ್ಯ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಮಿ. ಇಂಡಿಯಾ ಗೋವರ್ಧನ್ ಎನ್. ಬಂಗೇರ, ರಾಷ್ಟ್ರೀಯ ದೇಹದಾರ್ಢ್ಯ ಪಟು ಮಿ. ಕರ್ನಾಟಕ ನಿತ್ಯಾನಂದ ಕೋಟ್ಯಾನ್, ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಕಾರ್ಯಾಧ್ಯಕ್ಷ ಚಂದ್ರಹಾಸ್ ಕಾಂಚನ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಕಾಮತ್, ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ ಇದರ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಮಾಜಿ ಅಧ್ಯಕ್ಷ ಕೆ. ಮಂಜಪ್ಪ ಸುವರ್ಣ, ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಭೋಜರಾಜ್ ಆರ್. ಕಿದಿಯೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಶ್ರೀ ರಾಮಾಂಜನೇಯ ಪೂಜಾ ಮಂದಿರ ಹಾಗೂ ವ್ಯಾಯಾಮ ಶಾಲೆಯ ಗೌರವ ಸಂಚಾಲಕ ಶೇಖರ್ ಎ. ಜತ್ತನ್, ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ಕೇಶವ ಎ. ಜತ್ತನ್, ಸಹ ಸಂಚಾಲಕರಾದ ಮಹೇಂದ್ರ ಕೋಟ್ಯಾನ್, ವಿಠ್ಠಲ ಜತ್ತನ್, ಪೂಜಾ ಮಂದಿರ ನಿರ್ಮಾಣದ ಗುತ್ತಿಗೆದಾರ ಅವಿನಾಶ್ ಪೂಜಾರಿ ಅಂಬಲಪಾಡಿ ಹಾಗೂ ಪರಿಸರದ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!