Wednesday, February 26, 2025
Wednesday, February 26, 2025

ಜು. 26- ಉಡುಪಿ ಡಾ. ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ಶಿಬಿರ

ಜು. 26- ಉಡುಪಿ ಡಾ. ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ಶಿಬಿರ

Date:

ಉಡುಪಿ, ಜು. 24: ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅದರ ಹೆಚ್ಚುವುದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥ ಡಾ.ರಾಜಾರಾಂ ಪೈ, ಡಾ.ಟಿ.ಎಂ.ಎ. ಪೈ ಆಸ್ಪತ್ರೆ, ಉಡುಪಿ, ಆಸ್ಟಿಯೊಪೊರೋಸಿಸ್ ತೊಂದರೆಯನ್ನು ಪತ್ತೆ ಹಚ್ಚುವಲ್ಲಿ ಬೋನ್ ಮಿನರಲ್ ಡೆನ್ಸಿಟಿ ಪರೀಕ್ಷೆಯ ಮಹತ್ವವನ್ನು ಒತ್ತಿ ಹೇಳುತ್ತಾರೆ.

ದೇಹವು ಹೊಸ ಮೂಳೆಗಳನ್ನು ಸಮರ್ಪಕವಾಗಿ ರೂಪಿಸಲು ವಿಫಲವಾದಾಗ ಅಥವಾ ಅಸ್ತಿತ್ವದಲ್ಲಿರುವ ಮೂಳೆಗಳ ನಾಶ ಹೆಚ್ಚಾದಾಗ ಆಸ್ಟಿಯೊಪೊರೋಸಿಸ್ ಸಂಭವಿಸುತ್ತದೆ. ಯಾವುದೇ ನೋವು – ಗಾಯ ಇಲ್ಲದೇ ಮಾಡುವ ಬಿ.ಎಂ.ಡಿ ಪರೀಕ್ಷೆಗೆ ಒಳಗಾಗುವ ಮೂಲಕ, ವ್ಯಕ್ತಿಗಳು ತಮ್ಮ ಮೂಳೆಗಳ ಸಾಂದ್ರತೆಯನ್ನು ಕಂಡು ಹಿಡಿಯಬಹುದು ಮತ್ತು ಸ್ಥಿತಿಯನ್ನು ನಿರ್ವಹಿಸುವಲ್ಲಿ ಸೂಕ್ತ ಮಾರ್ಗದರ್ಶನವನ್ನು ಪಡೆಯಬಹುದು.

ಆರಂಭಿಕ ಪತ್ತೆಯ ಮಹತ್ವವನ್ನು ತಿಳಿಸಲು ಮತ್ತು ಮೂಳೆಯ ಆರೋಗ್ಯವನ್ನು ಉತ್ತೇಜಿಸಲು, ಡಾ.ಟಿ.ಎಂ.ಎ. ಪೈ ಆಸ್ಪತ್ರೆಯು 26ನೇ ಜುಲೈ 2023 ರಂದು ಆರ್ಥೋಪೆಡಿಕ್ಸ್ ವಿಭಾಗದಲ್ಲಿ ಉಚಿತ ಬೋನ್ ಮಿನರಲ್ ಡೆನ್ಸಿಟಿ ಶಿಬಿರವನ್ನು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಆಯೋಜಿಸುತ್ತಿದೆ. ಶಿಬಿರವು 40 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ, ವಿಶೇಷವಾಗಿ ಹೆಚ್ಚಿನ ಅಪಾಯದಲ್ಲಿರುವ ಮಹಿಳೆಯರಿಗೆ ತೆರೆದಿರುತ್ತದೆ. 100 ವ್ಯಕ್ತಿಗಳಿಗೆ ಸೀಮಿತವಾಗಿದೆ. ನೋಂದಣಿ ಮೊದಲು ಬಂದವರಿಗೇ ಮೊದಲ ಸೇವೆಯ ಆಧಾರದ ಮೇಲೆ ಇರುತ್ತದೆ. ನೋಂದಣಿಗಾಗಿ, 0820-2526501 Extn – 2164 ಅನ್ನು ಸಂಪರ್ಕಿಸಬಹುದು ಎಂದು ಡಾ. ಟಿ.ಎಂ.ಎ. ಪೈ ಆಸ್ಪತ್ರೆ, ಉಡುಪಿಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!