Wednesday, February 26, 2025
Wednesday, February 26, 2025

ಇಂದಿನ ಯುವ ಜನಾಂಗ ಶಾಸ್ತ್ರೀಯ ಸಂಗೀತದ ಸೂಕ್ಷ್ಮಗಳನ್ನು ತಾಳ್ಮೆಯಿಂದ ಅರಿಯುವ ಯತ್ನ ಮಾಡಬೇಕು: ಪಂಡಿತ್ ಮಿಲಿಂದ್ ಚಿತ್ತಾಲ್

ಇಂದಿನ ಯುವ ಜನಾಂಗ ಶಾಸ್ತ್ರೀಯ ಸಂಗೀತದ ಸೂಕ್ಷ್ಮಗಳನ್ನು ತಾಳ್ಮೆಯಿಂದ ಅರಿಯುವ ಯತ್ನ ಮಾಡಬೇಕು: ಪಂಡಿತ್ ಮಿಲಿಂದ್ ಚಿತ್ತಾಲ್

Date:

ಮಣಿಪಾಲ, ಜು. 27: ಇಂದಿನ ಯುವ ಜನಾಂಗ ಶಾಸ್ತ್ರೀಯ ಸಂಗೀತದ ಸೂಕ್ಷ್ಮಗಳನ್ನು ತಾಳ್ಮೆಯಿಂದ ಅರಿಯುವ ಯತ್ನ ಮಾಡಬೇಕು ಎಂದು ಖ್ಯಾತ ಸಂಗೀತಗಾರ ಪಂಡಿತ್ ಮಿಲಿಂದ್ ಚಿತ್ತಾಲ್ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆಂಡ್ ಸೈನ್ಸಸ್ (ಜೆಸಿಪಿಎಎಸ್), ಎಂಐಸಿ, ಎಂಐಟಿ ಯ ಆಶ್ರಯದಲ್ಲಿ ನಡೆದ ಹಿಂದೂಸ್ತಾನಿ ಗಾಯನದ ನಂತರ ನಡೆದ ಸಂವಾದದಲ್ಲಿ ಅವರು ಮಾತನಾಡಿದರು. ಈ ಆಧುನಿಕ ಸಮಾಜದಲ್ಲಿ ಸೇರಿಕೊಂಡಿರುವ ತೀವ್ರತರವಾದ ವೇಗ ಬದುಕಿನ ನೆಮ್ಮದಿಯನ್ನು ಕದಲುತ್ತದೆ. ಈ ಸಂದರ್ಭದಲ್ಲಿ ಮುಖ್ಯವಾಗಿ ಸಂಗೀತವನ್ನೊಳಗೊಂಡಂತೆ ಎಲ್ಲಾ ಕಲೆಗಳು ಜೀವನದಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತವೆ ಎಂದು ಅವರು ಹೇಳಿದರು.

ಈ ಮೊದಲು ಖ್ಯಾತ ಲೇಖಕ ಯಶವಂತ್ ಚಿತ್ತಾಲ ಪುತ್ರರಾದ ಪಂಡಿತ್ ಮಿಲಿಂದ್ ಚಿತ್ತಾಲ್ ಇವರು ತಮ್ಮ ಸಂಗೀತದಲ್ಲಿ ರಾಗ್ ಶ್ರೀ, ರಾಗ್ ಜೈ ಜೈ ವಂತಿ, ಸೂರ್ ದಾಸ್ ಭಜನ್, ತೀರ್ಥ ವಿಠ್ಠಲ ಕ್ಷೇತ್ರ ವಿಠ್ಠಲ, ಮರಾಠಿ ಅಭಂಗ್ ಇತ್ಯಾದಿಗಳನ್ನು ಪ್ರಸ್ತುತಪಡಿಸಿದರು. ಅವರ ಜೊತೆ ವಯಲಿನ್ ನಲ್ಲಿ ರಂಗ ಪೈ, ತಬಲಾದಲ್ಲಿ ಭಾರವಿ ಧೇರಾಜೆ, ಹಾರ್ಮೋನಿಯಂ ನಲ್ಲಿ ಶಶಿಕಿರಣ್, ತಾನ್ ಪುರದಲ್ಲಿ ಪ್ರವೀಣ್ ಕರಾಡಗಿ ಸಾಥ್ ನೀಡಿದರು.

ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಮಾತನಾಡಿ, ಸಂಸ್ಥೆಯಲ್ಲಿ ನೀಡಲಾಗುತ್ತಿರುವ ಕೋರ್ಸ್‌ಗಳು ಸಂಗೀತ ಸೇರಿದಂತೆ ವಿವಿಧ ಪ್ರಕಾರದ ಕಲೆಗಳಿಗೆ ಹೇಗೆ ಸಂವೇದನಾಶೀಲವಾಗಿರಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ಕಲಿಸುತ್ತದೆ ಎಂದರು. ಮಾಹೆ ಸಾಂಸ್ಕೃತಿಕ ಸಮನ್ವಯ ಸಮಿತಿ ಅಧ್ಯಕ್ಷೆ ಡಾ. ಶೋಭಾ ಯು ಕಾಮತ್ ಸಂಗೀತ ಕಲಾವಿದರನ್ನು ಸನ್ಮಾನಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!