Wednesday, February 26, 2025
Wednesday, February 26, 2025

ಯಕ್ಷಶಿಕ್ಷಣ ಟ್ರಸ್ಟ್ ವಾರ್ಷಿಕ ಸಭೆ

ಯಕ್ಷಶಿಕ್ಷಣ ಟ್ರಸ್ಟ್ ವಾರ್ಷಿಕ ಸಭೆ

Date:

ಉಡುಪಿ, ಜು. 27: ಯಕ್ಷಶಿಕ್ಷಣ ಟ್ರಸ್ಟ್ ನ ವಾರ್ಷಿಕ ಸಭೆ ಗುರುವಾರ ಶ್ರೀ ಕೃಷ್ಣ ಮಠದ ಕನಕ ಮಂಟಪದಲ್ಲಿ ಪರ್ಯಾಯ ಮಠಾಧೀಶರೂ ಟ್ರಸ್ಟ್ ನ ಗೌರವಾಧ್ಯಕ್ಷರೂ ಆಗಿರುವ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು. ಉಡುಪಿ ಶಾಸಕರಾದ, ಟ್ರಸ್ಟ್ ನ ನೂತನ ಅಧ್ಯಕ್ಷರೂ ಆದ ಯಶ್ಪಾಲ್ ಎ.ಸುವರ್ಣ, ಸ್ಥಾಪಕಾಧ್ಯಕ್ಷರಾದ ಕೆ. ರಘುಪತಿ ಭಟ್ ಇವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕೋಶಾಧಿಕಾರಿ ಎಚ್.ಎನ್.ಶೃಂಗೇಶ್ವರ್ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ವರದಿ ಒಪ್ಪಿಸಿದರು.

14 ವರ್ಷ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕೆ.ಎಸ್. ಸುಬ್ರಮಣ್ಯ ಬಾಸ್ರಿ ಇವರ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸಿಕೊಳ್ಳಲಾಯಿತು. ಈ ಬಾರಿ ಉಡುಪಿ ವಿಧಾನಸಭಾ ಕ್ಷೇತ್ರದ 43 ಪ್ರೌಢಶಾಲೆಗಳು, ಹಾಗೂ ಪ್ರಥಮ ಬಾರಿಗೆ ಕಾಪು ವಿಧಾನಸಭಾ ಕ್ಷೇತ್ರದ 15 ಪ್ರೌಢಶಾಲೆಗಳು, ಕುಂದಾಪುರ ವಿಧಾನಸಭಾ ಕ್ಷೇತ್ರದ 9 ಪ್ರೌಢಶಾಲೆಗಳು ಯಕ್ಷಶಿಕ್ಷಣಕ್ಕೆ ಒಳಪಡಲಿವೆ. 32 ಗುರುಗಳು ಯಕ್ಷಶಿಕ್ಷಣ ನೀಡಲಿದ್ದಾರೆ. ಸಭೆಯಲ್ಲಿ ಟ್ರಸ್ಟಿಗಳಾದ ಎಂ.ಗಂಗಾಧರ್ ರಾವ್, ವಿ.ಜಿ.ಶೆಟ್ಟಿ, ಎಸ್.ವಿ.ಭಟ್, ಮೀನಾಲಕ್ಷಣಿ ಅಡ್ಯಂತಾಯ, ವಿದ್ಯಾ ಪ್ರಸಾದ್, ಗಣೇಶ್ ಬ್ರಹ್ಮಾವರ್, ನಟರಾಜ ಉಪಾಧ್ಯ, ನಾಗರಾಜ ಹೆಗಡೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!