Friday, October 18, 2024
Friday, October 18, 2024

ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ನೇಮಕ

ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ನೇಮಕ

Date:

ಉಡುಪಿ, ಆಗಸ್ಟ್ 3: ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಬೈಂದೂರು, ಬ್ರಹ್ಮಾವರ, ಕುಂದಾಪುರ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ಮಾಡುವ ಸಲುವಾಗಿ ಈ ಕೆಳಕಂಡ ಅಧಿಕಾರಿಗಳನ್ನು ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಉಡುಪಿ ತಾಲೂಕು: ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ ಮಹಿಳೆ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಮತ್ತು ಕುಕ್ಕೆಹಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಅ.ಜಾತಿ ಮ) ಸ್ಥಾನಕ್ಕೆ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕ ಎಸ್.ಎನ್.ರಮೇಶ್, ಬೈರಂಪಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ-ಮ) ಸ್ಥಾನಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಗೌತಮ್ ಶಾಸ್ತ್ರೀ, ಕಲ್ಯಾಣಪುರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ತೋನ್ಸೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕ ಶಂಕರ್, ತೆಂಕನಿಡಿಯೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಪಂ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಬಡಾನಿಡಿಯೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ರಾಜ್, ಅಂಬಲಪಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಅ.ಪಂ-ಮ) ಸ್ಥಾನಕ್ಕೆ ಮತ್ತು ಕಡೆಕಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಉಡುಪಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ಉದ್ಯಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಮತ್ತು ಬಡಗಬೆಟ್ಟು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ ನಿರ್ದೇಶಕ ನಿಧಿಶ್, ಆತ್ರಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಕೊಡಿಬೆಟ್ಟು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಹಾಜಿರಾ ಸಜಿನಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಗೌತಮ್ ಶಾಸ್ತ್ರೀ, ಮಣಿಪುರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಮತ್ತು ಅಲೆವೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿನಾಯಕ್ ಪೂಜಾರ್ ಅವರನ್ನು ಚುನಾವಣಾ ಅಧಿಕಾರಿಯಾಗಿ ನೇಮಿಸಲಾಗಿದೆ.

ಕಾಪು ತಾಲೂಕು: ಬೆಳ್ಳೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ, ಮುದರಂಗಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ ಹಿಂ.ವ.ಬ-ಮ) ಸ್ಥಾನಕ್ಕೆ ಮತ್ತು ಪಲಿಮಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್, ಕುರ್ಕಾಲು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ, ಶಿರ್ವಾ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಮತ್ತು ಕಟಪಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಹಿರಿಯ ಮೀನುಗಾರಿಕಾ ನಿರ್ದೇಶಕರ ಕಚೇರಿಯ ಮೀನುಗಾರಿಕಾ ಸಹಾಯಕ ನಿರ್ದೇಶಕ ಸಚಿನ್, ಇನ್ನಂಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ), ಮಜೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಮತ್ತು ಪಡುಬಿದ್ರಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ತೊಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವರುಣ್ ಕೆ.ಜೆ, ಕೋಟೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿವೇಕಾನಂದ ಗಾಂವ್ಕರ್, ಕುತ್ಯಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಅ.ಜಾತಿ-ಮ) ಮತ್ತು ಎಲ್ಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ್, ಬೆಳಪು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಮತ್ತು ಬಡಾ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ನಿಧೀಶ್, ತೆಂಕ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಹೆಜಮಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ–ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಅಶ್ವಿನಿ ಅವರನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಕಾರ್ಕಳ ತಾಲೂಕು: ಕಡ್ತಲ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಮರ್ಣೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ-ಮ) ಸ್ಥಾನಕ್ಕೆ ಬೈಲೂರು ಸರಕಾರಿ ಪ್ರೌಢಶಾಲೆಯ ಉಪಪ್ರಾಂಶುಪಾಲ ನಾಗರಾಜ್, ಹಿರ್ಗಾನ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಮತ್ತು ಶಿರ್ಲಾಲು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಅ.ಜಾತಿ-ಮ) ಸ್ಥಾನಕ್ಕೆ ಕಾರ್ಕಳ ತಾಲೂಕು ಸಹಾಯಕ ತೋಟಗಾರಿಕಾ ಅಧಿಕಾರಿ ರಾಹುಲ್ ನಾಶಿಪುಡಿ, ಕೆರ್ವಾಶೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಮತ್ತು ಮಾಳ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ,ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಕಾರ್ಕಳ ಪುರಸಭೆಯ ಕಮ್ಯುನಿಟಿ ಎಫೈರ್ಸ್ ಆಫೀಸರ್ ಈಶ್ವರ್ ನಾಯಕ್, ಮುಡಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಮತ್ತು ದುರ್ಗಾ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಕಾರ್ಕಳ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಬಾಲಕೃಷ್ಣ ನಾಯರ್, ಕುಕ್ಕುಂದೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ) ಹಾಗೂ ಉಪಾಧ್ಯಕ್ಷ ( ಹಿಂ.ವ.ಅ-ಮ) ಸ್ಥಾನಕ್ಕೆ ಕುಕ್ಕುಜೆ ಸರಕಾರಿ ಪದವಿ ಪೂರ್ವ ಕಾಲೇಜಿನ ಮುಖ್ಯ ಅಧ್ಯಾಪಕ ಪ್ರಶಾಂತ್ ಶೆಟ್ಟಿ, ಎರ್ಲಪಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಬೈಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ. ಶ್ರೀನಿವಾಸ್, ನೀರೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ ( ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಪಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಕಾರ್ಕಳ ಸಹಾಯಕ ತೋಟಗಾರಿಕಾ ಅಧಿಕಾರಿ ಕುಮಾರ್ ಡಿ, ಕಲ್ಯಾ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ) ಸ್ಥಾನಕ್ಕೆ ಮತ್ತು ನಿಟ್ಟೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಕಾರ್ಕಳ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಸೋಮಶೇಖರ್, ಸಾಣೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಮಿಯ್ಯಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಜೆ, ನಲ್ಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಅ.ಪಂ-ಮ) ಸ್ಥಾನಕ್ಕೆ ಹಾಗೂ ಈದು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ ( ಹಿಂ.ವ.ಅ-ಮ) ಸ್ಥಾನ್ಕಕೆ ಕಾರ್ಕಳ ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತರಣಾಧಿಕಾರಿ ಅನಂತ ನಾರಾಯಣ ಭಟ್ಕಳ್, ರೆಂಜಾಳ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಹಾಗೂ ಇರ್ವತ್ತೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಕಾರ್ಕಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ಕಾರ್ಯದರ್ಶಿ ಶಿವಾನಂದ, ಬೋಳ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಕಾಂತಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಕಾರ್ಕಳ ತಾಲೂಕು ಪಂಚಾಯತ್ ಕಚೇರಿಯ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ. ಭಾಸ್ಕರ್, ಬೆಳ್ಮಣ್ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ನಂದಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ (ಅ.ಪಂ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಕಾರ್ಕಳ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಮಿಥುನ್, ಇನ್ನಾ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಅ.ಜಾತಿ) ಸ್ಥಾನಕ್ಕೆ ಮತ್ತು ಮುಂಡ್ಕೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಅ.ಜಾ-ಮ) ಸ್ಥಾನಕ್ಕೆ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಟಿ.ಎಲ್ ಅವರನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಬೈಂದೂರು ತಾಲೂಕು: ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಬಿಜೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಪಂ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಬೈಂದೂರು ಪಂಚಾಯತ್ ರಾಜ್ ಅಭಿಯಂತರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪಿ. ರಾಜ್‌ಕುಮಾರ್, ಕೆರ್ಗಾಲು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಕಾಲ್ತೋಡು ಗ್ರಾಮ ಪಂಚಾಯತ್ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಕಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಕುಂದಾಪುರ ತಾಲೂಕು ಸಹಾಯಕ ತೋಟಗಾರಿಕೆ ಅಧಿಕಾರಿ ಪ್ರವೀಣ, ಕೊಲ್ಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಜಡ್ಕಲ್ ಗ್ರಾಮ ಪಂಚಾಯತ್‌ನ ಅದ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ-ಮ) ಸ್ಥಾನಕ್ಕೆ ಮತ್ತು ಗೋಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಬೈಂದೂರು ವಲಯ ಅರಣ್ಯಾಧಿಕಾರಿ ಸಿದ್ದೇಶ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಅ.ಪಂ-ಮ), ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಹೇರೂರು ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಬಿ.ಆರ್.ಸಿ (ಪ್ರಭಾರ) ಮಂಜುನಾಥ ನಾಯ್ಕ್, ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ, ನಾಡ ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಹಳ್ಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಅ.ಜಾ-ಮ) ಸ್ಥಾನಕ್ಕೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ. ಜಿ ಅವರನ್ನು ಜಿಲ್ಲಾ ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಬ್ರಹ್ಮಾವರ ತಾಲೂಕು: ಕೋಟತಟ್ಟು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಮತ್ತು ಕೋಟ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ, ಪಾಂಡೇಶ್ವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಐರೋಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಪಂ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ-ಮ) ಸ್ಥಾನಕ್ಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಇಂದು ಎಂ, ಬಾರ್ಕೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಮತ್ತು ವಡ್ಡರ್ಸೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ ( ಅ.ಜಾತಿ-ಮ) ಸ್ಥಾನಕ್ಕೆ ಕೋಟ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಸುಪ್ರಭಾ, ಯಡ್ತಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಶಿರಿಯಾರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಂಗನಾಥ, ಬಿಲ್ಲಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಆವರ್ಸೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ, ಹೆಗ್ಗುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಹನೇಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಕೋಟ ಸಹಾಯಕ ತೋಟಗಾರಿಕಾ ಅಧಿಕಾರಿ ಪವಿತ್ರ ಎಸ್, ಕಾಡೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಸೈಬ್ರಕಟ್ಟೆ ಪಶು ವೈದ್ಯಾಧಿಕಾರಿ ಡಾ. ಪ್ರದೀಪ್ ಕುಮಾರ್ ಎನ್ ಕೋಂಡೋಜಿ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಅ,ಪಂ-ಮ) ಸ್ಥಾನಕ್ಕೆ ಮತ್ತು ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಬ್ರಹ್ಮಾವರ ಸಹಾಯಕ ತೋಟಗಾರಿಕಾ ಅಧಿಕಾರಿ ಮಹಾಂತೇಶ, ಕಳ್ತೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ) ಸ್ಥಾನಕ್ಕೆ ಮತ್ತು ಕರ್ಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಕಳ್ತೂರು ಪಶು ವೈದ್ಯಾಧಿಕಾರಿ ಡಾ. ಮಂಜುನಾಥ ಅಡಿಗ, ಆರೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಉಪ್ಪೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್, ವಾರಂಬಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಹಾರಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪಾಪಣ್ಣ ಎನ್.ಎ, ಚಾಂತಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಹಾವಂಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸತೀಶ್ ಕುಮಾರ್, ಹಂದಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಮತ್ತು ನೀಲಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಹೆಬ್ರಿ ತಾಲೂಕು: ಕುಚ್ಚೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಪಂ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಚಾರಾ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಶಿವಪುರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಉಮೇಶ್ ಎ.ಡಿ, ನಾಡ್ಪಾಲು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ, ಮುದ್ರಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಅ.ಜಾತಿ-ಮ) ಸ್ಥಾನಕ್ಕೆ ಮತ್ತು ವರಂಗ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿಷ್ಣುಮೂರ್ತಿ, ಹೆಬ್ರಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ), ಬೆಳ್ಳೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಅ.ಪಂ-ಮ) ಮತ್ತು ಮಡಾಮಕ್ಕಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಹೆಬ್ರಿ ತಾಲೂಕು ಪಂಚಾಯತ್ ಕಚೇರಿಯ ತಾಲೂಕು ಯೋಜನಾಧಿಕಾರಿ ಮಹೇಶ್ ಅವರನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಕುಂದಾಪುರ ತಾಲೂಕು: ಆಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ, ಕೆರಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಹಕ್ಲಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಆಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನಾಗೇಶ್ ನಾಯ್ಕ್, ಚಿತ್ತೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಅ.ಜಾತಿ-ಮ) ಸ್ಥಾನಕ್ಕೆ ಮತ್ತು ವಂಡ್ಸೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ.-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಸಿದ್ಧಾಪುರ ವಾರಾಹಿ ಜಲಾಶಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಕಿರಣ್ ಪಡ್ತಿ, ತ್ರಾಸಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ, ಗುಜ್ಜಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಹೆಮ್ಮಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ) ಮತ್ತು ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಕುಂದಾಪುರ ತಾಲೂಕು ಪಂಚಾಯತ್ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ, ತಲ್ಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ), ಹಟ್ಟಿಯಂಗಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಕರ್ಕುಂಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಆಜ್ರಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಕುಂದಾಪುರ ಕೃಷಿ ಅಧಿಕಾರಿ ರಘುರಾಮ ಶೆಟ್ಟಿ, ಹೊಸಂಗಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಮತ್ತು ಸಿದ್ಧಾಪುರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ನಂ.1 ಗುಣ ನಿಯಂತ್ರಣ ವಿಭಾಗ, ಸಹಾಯಕ ಕಾರ್ಯಪಾಲಕ ಅಭಿಯಂತರ ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಅಭಿಷೇಕ ಗುನಗಿ, ಶಂಕರನಾರಾಯಣ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ-ಮ) ಸ್ಥಾನಕ್ಕೆ ಶಂಕರನಾರಾಯಣ ಸರ್ಕಾರಿನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಂಗರಾಜು, ಅಂಪಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಕಾವ್ರಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್, ಬಳ್ಕೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಬಸ್ರೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ.-ಮ) ಸ್ಥಾನಕ್ಕೆ ಮತ್ತು ಆನಗಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಕುಂದಾಪುರ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶಾಂತ ಎಮ್, ಹಂಗಳೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಕೋಣಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಕುಂದಾಪುರ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಬಾಬಣ್ಣ ಪೂಜಾರಿ, ಕೋಟೇಶ್ವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಬೀಜಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ) ಸ್ಥಾನಕ್ಕೆ ಕುಂದಾಪುರ ಯುವ ಜನ ಮತ್ತು ಸೇವಾ ಕ್ರೀಡಾಧಿಕಾರಿ ಸುಕುಮಾರ ಶೆಟ್ಟಿ, ಕುಂಭಾಶಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ.-ಮ) ಸ್ಥಾನಕ್ಕೆ ಮತ್ತು ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಅ.ಪಂ-ಮ) ಸ್ಥಾನಕ್ಕೆ ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ, ಬೇಳೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಮತ್ತು ಕೆದೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ.ಕಿರಣಬಾಬು, ಕಾಳಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ ( ಸಾಮಾನ್ಯ-ಮ) ಸ್ಥಾನಕ್ಕೆ ಕುಂದಾಪುರ ಲೋಕೋಪಯೋಗಿ ಇಲಾಖೆಯ ನಂ.2 ಉಪ ವಿಭಾಗದ ಸಹಾಯಕ ಅಭಿಯಂತರ ಶಿವಮೂರ್ತಿ, ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಮೊಳಹಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಮತ್ತು ಉಪಾಧ್ಯಕ್ಷ (ಸಾಮಾನ್ಯ-ಮ) ಮತ್ತು ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಸಿದ್ಧಾಪುರ ನಂ.3 ವಾರಾಹಿ ಜಲಾಶಯ ಯೋಜನೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್ ಶೇಟ್, ಹಾಲಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ), ಹೆಂಗವಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಮತ್ತು ಅಮಾಸೆಬೈಲು ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಸಮಾಜ ಕಲ್ಯಾಣ ಇಲಾಖೆಯ ಕುಂದಾಪುರ ತಾಲೂಕು ಸಹಾಯಕ ನಿರ್ದೇಶಕ ರಾಘವೇಂದ್ರ ಆರ್.ವಿ, ಇಡೂರು-ಕುಂಜ್ಞಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಹೊಸಾಡು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಮತ್ತು ಕಟ್‌ಬೆಲ್ತೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಪಂ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಸಿದ್ಧಾಪುರ ನಂ.3 ವಾರಾಹಿ ಜಲಾಶಯ ಯೋಜನೆ ಉಪ ವಿಭಾಗದ ಸಹಾಯಕ ಅಭಿಯಂತರ ಎನ್.ಜಿ.ಭಟ್, ಗುಲ್ವಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ, ಯಡಮೊಗೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಉಳ್ಳೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಕುಂದಾಪುರ ಲೋಕೋಪಯೋಗಿ ಇಲಾಖೆಯ ಉಪ ವಿಭಾಗದ ಸಹಾಯಕ ಅಭಿಯಂತರ ರಾಘವೇಂದ್ರ ನಾಯ್ಕ್, ಕಂದಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಅ.ಜಾತಿ) ಸ್ಥಾನಕ್ಕೆ ಪಶುಸಂಗೋಪನಾ ಇಲಾಖೆಯ ಕುಂದಾಪುರ ಸಹಾಯಕ ನಿರ್ದೇಶಕ ಬಾಬಣ್ಣ ಪೂಜಾರಿ, ಗೋಪಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಅ.ಜಾತಿ-ಮ) ಸ್ಥಾನಕ್ಕೆ ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ.ಕಿರಣಬಾಬು, ಕೊರ್ಗಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಹಾಗೂ ಕುಂದಾಪುರ ಲೋಕೋಪಯೋಗಿ ಇಲಾಖೆಯ ಉಪ ವಿಭಾಗದ ಸಹಾಯಕ ಅಭಿಯಂತರ ಶಿವಮೂರ್ತಿ ಅವರನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!