Monday, February 24, 2025
Monday, February 24, 2025

ಕೊಡವೂರು: ಗೋಶಾಲೆ ನೂತನ‌ ಕಟ್ಟಡಕ್ಕೆ ಶಿಲಾನ್ಯಾಸ

ಕೊಡವೂರು: ಗೋಶಾಲೆ ನೂತನ‌ ಕಟ್ಟಡಕ್ಕೆ ಶಿಲಾನ್ಯಾಸ

Date:

ಕೊಡವೂರು: ದೇವಸ್ಥಾನಗಳಲ್ಲಿ ಶಿಲಾ ವಿಗ್ರಹ ಪ್ರತಿಮೆಗಳಲ್ಲಿ ಭಗವಂತನ ಚೈತನ್ಯವನ್ನು ತುಂಬಿ ಆರಾಧಿಸಲಾಗುತ್ತದೆ. ಗೋವುಗಳಲ್ಲಿ ದೇವಾನುದೇವತೆಗಳ ಸನ್ನಿಧಾನ ನಿತ್ಯ ಜಾಗೃತವಾಗಿರುತ್ತದೆ. ಚೈತನ್ಯ ತುಂಬಿದ ವಿಗ್ರಹದಷ್ಟೇ ಗೋವುಗಳೂ ಪ್ರಮುಖವಾಗಿವೆ.

ಆದ್ದರಿಂದ ದೇವಳಗಳ ಜೀರ್ಣೋದ್ಧಾರಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಗೋಶಾಲೆಗಳ ನಿರ್ಮಾಣ, ನವೀಕರಣಗಳಿಗೂ ನೀಡಬೇಕು ಎಂದು ಗೋವರ್ಧನಗಿರಿ ಟ್ರಸ್ಟ್ ಮುಖ್ಯಸ್ಥರೂ ಹಾಗೂ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದರು.

ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ಕೊಡವೂರು ಸಮೀಪವಿರುವ ನಂದಗೋಕುಲ ಗೋಶಾಲೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಸಂದೇಶ ನೀಡಿದರು.

ಕೆಎಂಎಫ್ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ, ಆಸ್ಟ್ರೇಲಿಯಾದಲ್ಲಿ ಯೋಗ ಶಿಕ್ಷಕರಾಗಿರುವ ರಾಜೇಂದ್ರ ಎಂಕಣ್ಣಮೂಲೆ ಶುಭ ಹಾರೈಸಿದರು. ಬಡಾನಿಡಿಯೂರಿನ ಬಾಲಯ್ಯ ಕುಟುಂಬಿಕರ ಪಂಜುರ್ಲಿ ಟ್ರಸ್ಟ್ ಮುಖ್ಯಸ್ಥ ದಾನಿ ಉಮೇಶ್ ರಾವ್, ಕೊಡವೂರು ಶಂಕರನಾರಾಯಣ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ. ಸುಧೀರ್ ರಾವ್, ನಗರಸಭಾ ಸದಸ್ಯ ವಿಜಯ್ ಕೊಡವೂರು, ಡಾ. ಸರ್ವೋತ್ತಮ ಉಡುಪ, ನಾಗರಾಜ ಪುರಾಣಿಕ್, ಇಂಜಿನಿಯರ್ ರಾಜೇಂದ್ರ ಮಯ್ಯ, ಚಂದ್ರಶೇಖರ್, ಗೋಶಾಲೆ ನಿರ್ವಾಹಕಿ ಪ್ರಮೀಳಾ ಜೋಶಿ ಮೊದಲಾದವರು ಉಪಸ್ಥಿತರಿದ್ದು ಶಿಲಾನ್ಯಾಸ ನೆರವೇರಿಸಿದರು.

ಈ ಗೋಶಾಲೆಯು ಒಂದೂವರೆ ಎಕ್ರೆ ಪ್ರದೇಶದಲ್ಲಿ 1984 ರಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸ್ಥಾಪಿಸಿದ ಮೊದಲ ಗೋಶಾಲೆಯಾಗಿದ್ದು 150 ಗೋವುಗಳು ಪೋಷಿಸಲ್ಪಡುತ್ತಿವೆ. ಪ್ರಸ್ತುತ ನೂತನ ಒಂದು ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಟ್ರಸ್ಟ್ ವ್ಯವಸ್ಥಾಪಕ ರಘುರಾಮಾಚಾರ್ಯ ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಸ್ಟ್ರೇಲಿಯಾದ ಯೋಗ ಶಿಕ್ಷಕ ರಾಜೇಂದ್ರ ಎಂಕಣ್ಣಮೂಲೆ ರೂ. ಎರಡು ಲಕ್ಷ, ಕೆಎಂಎಫ್ ಪರವಾಗಿ ಅಧ್ಯಕ್ಷ ರವಿರಾಜ ಹೆಗ್ಡೆ ಒಂದು ಲಕ್ಷ ರೂ ದೇಣಿಗೆ ಹಸ್ತಾಂತರಿಸಿದರು.

ವಾಸುದೇವ ಭಟ್ ಪೆರಂಪಳ್ಳಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ವೇಣುಗೋಪಾಲ ಸಾಮಗರು ಧಾರ್ಮಿಕ ವಿಧಿ ನೆರವೇರಿಸಿದರು. ಕೃಷ್ಣ ಭಟ್, ವಿಷ್ಣುಮೂರ್ತಿ ಆಚಾರ್ಯ, ಪ್ರಾಣೇಶ್ ಜೋಶಿ ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!