Wednesday, February 26, 2025
Wednesday, February 26, 2025

ಮುಕ್ತ ವಿವಿ ಶೈಕ್ಷಣಿಕ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ

ಮುಕ್ತ ವಿವಿ ಶೈಕ್ಷಣಿಕ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ

Date:

ಉಡುಪಿ, ಆ.17: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪಿ.ಯು.ಸಿ ನಂತರ ಉನ್ನತ ವಿದ್ಯಾಭ್ಯಾಸ ಮಾಡಲು ಅನೇಕ ಕೋರ್ಸುಗಳು ಲಭ್ಯವಿದ್ದು, ಉನ್ನತ ವಿಧ್ಯಾಬ್ಯಾಸ ಬಯಸುವ ನೌಕರರು, ಖಾಸಗಿ ಕೆಲಸ ನಿರ್ವಹಿಸುವ ಶ್ರಮಿಕ ವರ್ಗಗಳು, ಮನೆಯಲ್ಲಿ ಇರುವ ಗೃಹಿಣಿಯರು, ಕಾಲೇಜಿಗೆ ಹೋಗಲು ಆಗದವರು ಹೀಗೆ ಪ್ರತಿಯೊಬ್ಬರು ದೂರ ಶಿಕ್ಷಣದ ಮೂಲಕ ಉನ್ನತ ಪದವಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ ಜುಲೈ ಶೈಕ್ಷಣಿಕ ಸಾಲಿನ ಪ್ರವೇಶಾತಿಗಳ ಕುರಿತು ಮತ್ತು ದೂರ ಶಿಕ್ಷಣದಲ್ಲಿ ಉನ್ನತ ವಿದ್ಯಾಬ್ಯಾಸ ಮಾಡಲು ಲಭ್ಯವಿರುವ ವಿವಿಧ ಕೋರ್ಸ್ಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಮುಕ್ತ ವಿವಿ ಶೈಕ್ಷಣಿಕ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ.ರಾ.ಮು.ವಿ.ಯ ಕೋರ್ಸುಗಳು ಬೇರೆ ಸಂಪ್ರಾದಾಯಕ ವಿಶ್ವವಿದ್ಯಾನಿಲಯಕ್ಕೆ ಸರಿ ಸಮಾನವಾದ ಮತ್ತು ದೂರ ಶಿಕ್ಷಣ ನೀಡುವ ರಾಜ್ಯದ ಏಕೈಕ ವಿಶ್ವ ವಿದ್ಯಾಲಯವಾಗಿದ್ದು, ಇಲ್ಲಿ ಪದವಿ ಪಡೆದವರು ಕೆ.ಎ.ಎಸ್ ಮತ್ತು ಐ.ಎ.ಎಸ್ ಮಾಡಬಹುದು. ದೇಶ ವಿದೇಶಗಳಲ್ಲಿ ನೌಕರಿ ಮಾಡಲು ಇದು ಸಹಕಾರಿಯಾಗಿದೆ. ಮುಕ್ತ ವಿವಿಯ ಪ್ರಾದೇಶಿಕ ಕೇಂದ್ರವು ಉಡುಪಿಯಲ್ಲಿರುವದರಿಂದ ಜಿಲ್ಲೆಯ ಉನ್ನತ ಶಿಕ್ಷಣ ವಂಚಿತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಶಾಸಕ ಯಶ್ಪಾಲ್ ಎ ಸುವರ್ಣ ಮುಕ್ತ ವಿ.ವಿ ಶೈಕ್ಷಣಿಕ ಪ್ರಚಾರ ವಾಹನದ ಪ್ರಚಾರ ಕಾರ್ಯವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಉಡುಪಿ ಪ್ರಾದೇಶಿಕ ನಿರ್ದೇಶಕ ಡಾ. ಕೆ.ಪಿ.ಮಹಾಲಿಂಗು ಕಲ್ಕುಂದ, ಪ್ರಚಾರ ವಾಹನದ ಮ್ಯಾನೇಜರ್ ಸಿದ್ದೇಗೌಡ, ನಗರಸಭೆ ಸದಸ್ಯರು, ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!