Monday, February 24, 2025
Monday, February 24, 2025

ಉಡುಪಿ ವರ್ತಕರ ನಿರ್ಧಾರಕ್ಕೆ ಕಾಂಗ್ರೆಸ್ ‌ಮುಖಂಡರ ಬೆಂಬಲ

ಉಡುಪಿ ವರ್ತಕರ ನಿರ್ಧಾರಕ್ಕೆ ಕಾಂಗ್ರೆಸ್ ‌ಮುಖಂಡರ ಬೆಂಬಲ

Date:

ಉಡುಪಿ: ನಿನ್ನೆ ಉಡುಪಿಯಲ್ಲಿ ವರ್ತಕರ ಸಂಘದ ಒಕ್ಕೂಟದವರು ಪತ್ರಿಕಾಗೋಷ್ಠಿ‌ ನಡೆಸಿ ಸರ್ಕಾರದ ‌ವಾರಾಂತ್ಯ ಕರ್ಫ್ಯೂ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಇದೇ‌ ಬರುವ ಶನಿವಾರ ರವಿವಾರ ವ್ಯಾಪಾರ ಸ್ಥಗಿತಗೊಳಿಸುವುದಿಲ್ಲ ಎಂದಿದ್ದಾರೆ.

ಈ‌ ನಿರ್ಧಾರವನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾ ಪ್ರಕಟಣೆ ನೀಡಿದ ಮಾಜಿ ಎಐಸಿಸಿ ಸದಸ್ಯರು ಕಾಂಗ್ರೆಸ್ ಮುಖಂಡರುಗಳಾದ ಅಮೃತ್ ಶೆಣೈ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾದ ರಮೇಶ ಕಾಂಚನ್ ವರ್ತಕರ ನಿರ್ಧಾರ ಸ್ವಾಗಿತಿಸಿದ್ದಾರೆ.

ಹಲವಾರು ಮಳಿಗೆಗಳಿಗೆ ಶನಿವಾರ ರವಿವಾರ ಮಾತ್ರ ಅತಿ ಹೆಚ್ಚಿನ ವ್ಯಾಪಾರ ಆಗುತ್ತದೆ. ಈಗಾಗಲೇ ಎರಡು ವರ್ಷಗಳಿಂದ ಕೊರೊನಾ ಹೆಸರಿನಲ್ಲಿ ಸರಕಾರ ತೆಗೆದುಕೊಂಡ ತಲೆ ಬುಡ ಇಲ್ಲದ ನಿರ್ಧಾರಗಳಿಂದ ಜನರ ರೋಸಿ‌ ಹೋಗಿದ್ದಾರೆ.

ರೋಗ ಹರಡದಂತೆ ತಡೆಯಲು ಲಾಕ್ಡೌನ್ ವಿಧಿಸದೆ ಸರಕಾರ ಯಾವುದೇ ಕ್ರಮ ಕೈಗೊಂಡರೂ ಕಾಂಗ್ರೆಸ್ ‌ಕಾರ್ಯಕರ್ತರು ಸಹಕಾರ ನೀಡಲಿದ್ದಾರೆ.

ಆದರೆ ಇನ್ನು‌ ಮುಂದೆ ಜನವಿರೋಧಿ ನೀತಿಗಳಿಗೆ ಸಹಕಾರ ನೀಡಲು ಸಾಧ್ಯವೇ ಇಲ್ಲ. ವರ್ತಕರ ಜತೆ ಬೀದಿಗಿಳಿದು ಹೋರಾಟ ಮಾಡಲೂ ಪಕ್ಷ‌ ಸಿದ್ಧವಾಗಿದೆ ಎಂದು‌ ಅಮೃತ್ ಶೆಣೈ ಹಾಗೂ ರಮೇಶ ಕಾಂಚನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...
error: Content is protected !!