Wednesday, February 26, 2025
Wednesday, February 26, 2025

ಕೃಷ್ಣ ಗುಜ್ಜಾಡಿಗೆ ಬೀಳ್ಕೊಡುಗೆ

ಕೃಷ್ಣ ಗುಜ್ಜಾಡಿಗೆ ಬೀಳ್ಕೊಡುಗೆ

Date:

ಗಂಗೊಳ್ಳಿ, ಸೆ. 2: ವಿದ್ಯಾರ್ಥಿಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ತಾನು ಕೂಡ ಬೆಳೆಯುವುದು ಓರ್ವ ನಿಜವಾದ ಶಿಕ್ಷಕನ ಸಾಮರ್ಥ್ಯವಾಗಿರುತ್ತದೆ. ಬದುಕಿನಲ್ಲಿ ಕಲಿಕೆ ನಿರಂತರವಾಗಿರಬೇಕು ಎಂದು ಜಿ. ಎಸ್ ವಿ. ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಕಳೆದ 10 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಇದೀಗ ಸರಕಾರಿ ಶಾಲಾ ಶಿಕ್ಷಕರಾಗಿ ನೇಮಕಗೊಂಡು ಬೇರೆಡೆಗೆ ತೆರಳುತ್ತಿರುವ ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ ಇವರ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ನಾರಾಯಣ ಈ ನಾಯ್ಕ್, ನರೇಂದ್ರ ಎಸ್ ಗಂಗೊಳ್ಳಿ, ಪ್ರವೀಣ್ ಕಾಮತ್, ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಶ್ರೀಧರ ಗಾಣಿಗ, ಜಿ.ಎಸ್ ವಿ.ಎಸ್ ಅಸೋಸಿಯೇಷನ್ ಸದಸ್ಯ ರಾಮನಾಥ ನಾಯಕ್ ಮೊದಲಾದವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಉಮೇಶ್ ಕರಣಿಕ್ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಜಿ ಎಸ್ ವಿ ಎಸ್ ಅಸೋಸಿಯೇಷನ್ ಸದಸ್ಯ ಅಶ್ವಿನ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಕೃಷ್ಣ ಗುಜ್ಜಾಡಿ ಇವರನ್ನು ಸನ್ಮಾನಿಸಿ ಅಭಿನಂದಿಸಿ ಬೀಳ್ಕೊಡಲಾಯಿತು. ಉಪನ್ಯಾಸಕ ಥಾಮಸ್ ಪಿ.ಎ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾಸ್ಕರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪವಿತ್ರ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!