Home ಸುದ್ಧಿಗಳು ಪ್ರಾದೇಶಿಕ ಬ್ರಹ್ಮಾವರ ರುಡ್ಸೆಟ್: ಉಚಿತ ಆಹಾರ ಪದಾರ್ಥ ತಯಾರಿಕೆ ತರಬೇತಿ

ಬ್ರಹ್ಮಾವರ ರುಡ್ಸೆಟ್: ಉಚಿತ ಆಹಾರ ಪದಾರ್ಥ ತಯಾರಿಕೆ ತರಬೇತಿ

215
0

ಬ್ರಹ್ಮಾವರ, ಸೆ.2: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಕೆನರಾ ಬ್ಯಾಂಕ್ ನ ಸಹಯೋಗದೊಂದಿಗೆ ನಡೆಯುತ್ತಿರುವ ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯಲ್ಲಿ ಉಚಿತ ಊಟ, ವಸತಿ, ಸಮವಸ್ತ್ರ, ತರಬೇತಿ ಕಿಟ್ ನೊಂದಿಗೆ ಸಂಪೂರ್ಣ ಉಚಿತ ಹಪ್ಪಳ ಉಪ್ಪಿನಕಾಯಿ, ವಿವಿಧ ಬಗೆಯ ಮಸಾಲೆ ಹುಡಿ ತಯಾರಿಕೆ ತರಬೇತಿ ದಿನಾಂಕ 21.09.2023 ರಿಂದ 30.09.2023ರ ವರೆಗೆ 10ದಿನಗಳ ನಡೆಯಲಿದೆ. ಈ ತರಬೇತಿಗೆ ಹೆಚ್ಚು ಬೇಡಿಕೆ ಇದ್ದು ಹಾಗೂ ಮುಂದಿನ ದಿನಗಳಲ್ಲಿ ಹೆಚ್ಚಿನ‌ ಮಾರುಕಟ್ಟೆಯನ್ನು ಹೊಂದಲಿದೆ.

ಈ ತರಬೇತಿಯಲ್ಲಿ ಹಪ್ಪಳ ಉಪ್ಪಿನಕಾಯಿ, ವಿವಿಧ ಬಗೆಯ ಮಸಾಲೆ ಹುಡಿ ತಯಾರಿಕೆ ಮಾಡಿ ಅದರ ವ್ಯವಹಾರ ನಡೆಸಲು‌ ಬೇಕಾದ ಮಾರುಕಟ್ಟೆ ನಡೆಸುವ ಬಗ್ಗೆ, ಬ್ಯಾಂಕಿನ ವ್ಯವಹಾರ, ಸರಕಾರಿ ಯೋಜನೆಗಳ ಬಗ್ಗೆ, ಯೋಜನಾ ವರದಿ ತಯಾರಿಸುವ ಬಗ್ಗೆ, ಸಮಯ ನಿರ್ವಹಣೆ, ಸಂವಹನ ಕೌಶಲ್ಯ, ಸಮಸ್ಯೆ ಬಗೆಹರಿಸುವ ಬಗ್ಗೆ, ಅವಲಂಬನೆ ಇಲ್ಲದೆ ವ್ಯವಹಾರಿಸುವ ಬಗ್ಗೆ, ರಿಸ್ಕ್ ತೆಗೆದುಕೊಳ್ಳವ ರೀತಿಗಳ ಬಗ್ಗೆ, ಗುಣಮಟ್ಟದ ನಿರ್ವಹಣೆ ಬಗ್ಗೆ ಮುಂತಾದ ವಿಷಯಗಳ ಬಗ್ಗೆ ವಿಶೇಷವಾದ ತರಬೇತಿ ನೀಡಲಾಗುವುದು.

ತರಬೇತಿ ಪಡೆಯಲು ಬಯಸುವವರು ಗ್ರಾಮೀಣ ಭಾಗದ 18 ರಿಂದ 45 ವರ್ಷದ ಒಳಗಿನವರು, ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿ ಇರಬೇಕು, ಕನ್ನಡ ಓದಲು ಬರೆಯಲು ಬರುವ ಮುಂದೇ ಇದನ್ನೇ ವೃತ್ತಿಯನ್ನಾಗಿ ಮಾಡಲು ಇಚ್ಚಿಸುವವರು ನಿಮ್ಮ ಹೆಸರು, ವಿಳಾಸ, ನಿಮ್ಮ ಮೊಬೈಲ್ ನಂ. ಜನ್ಮ ದಿನಾಂಕ ಬರೆದು ನೀವು ಪಡೆಯಲು ಇಚ್ಚಿಸುವ ತರಬೇತಿಯ ಯಾವುದೆಂದು ಬರೆದು, ನಿಮ್ಮ ಹೆಸರು ಇರುವ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಇರಿಸಿ ತಕ್ಷಣ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ಈ ಕೆಳಗಿನ ವಾಟ್ಸಪ್ ನಂ. ಕಳುಹಿಸಿ ಕೊಡಿ. ನಿರ್ದೇಶಕರು, ರುಡ್ ಸೆಟ್ ಸಂಸ್ಥೆ, 52ನೇ ಹೇರೂರು, ಬ್ರಹ್ಮಾವರ-576213 ಉಡುಪಿ ಜಿಲ್ಲೆ
ಇದು ವಾಟ್ಸಪ್ ನಂ. 9448348569 9449862808, 9632561145, 9844086383, 9591233748, 8861325564 ವೆಬ್ ಸೈಟ್ ನ ಮೂಲಕ ಸಹ ಅರ್ಜಿ ಸಲ್ಲಿಸಬಹುದು. http://WWW.rudsetitraining.org ಇಮೇಲ್ ವಿಳಾಸ: [email protected]

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.